Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...