Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...