Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...