Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...