Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...