Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?

- Advertisement -
- Advertisement -

ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು. ಈ ಮೊಘಲ್‌ ಭಯೋತ್ಪಾದಕರು ಖಾಲಿ ಜಾಗದಲ್ಲಿ ಮಸೀದಿಗಳನ್ನು ಕಟ್ಟಿಲ್ಲ. ನಮ್ಮ ಪವಿತ್ರ ದೇವಾಲಯಗಳನ್ನು ಕೆಡವಿ ಅದರ ಮೇಲೆ ಮಸೀದಿ ನಿರ್ಮಿಸಿದ್ದಾರೆ” ಎಂದು ಮತೀಯ ಗಲಭೆ ಸೃಷ್ಟಿಸಲು ಯತ್ನಿಸಲಾಗಿದೆ.

ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿರುವ ಸತ್ಯಸತ್ಯತೆಯನ್ನು ಪರಿಶೀಲಿಸುವಂತೆ ಆಲ್ಟ್‌ ನ್ಯೂಸ್‌‌ ವಾಟ್ಸ್‌ಆಪ್‌ ಸಹಾಯವಾಣಿಯಲ್ಲಿ (91 76000 11160) ಓದುಗರು ಕೇಳಿಕೊಂಡಿದ್ದು, ನಿಜಾಂಶವನ್ನು ಆಲ್ಟ್‌ನ್ಯೂಸ್ ನೀಡಿದೆ.

ನಿಜವೇನು?

ಈ ಚಿತ್ರವು ಕಲಾವಿದನಿಂದ ಸೃಷ್ಟಿಯಾದ ಒಂದು ಕಲಾಕೃತಿಯಾಗಿರುವುದು ವಾಸ್ತವವಾಗಿದೆ. ಚಿತ್ರದ ಕೆಳಗೆ ‘chandra colourist’ ಎಂಬ ಲೋಗೋ ಇದೆ. chandra colourist ಹೆಸರಿನ ಖಾತೆಯಲ್ಲಿ ಮೇ 8, 2016ರಲ್ಲಿ ಇದೇ ರೀತಿಯ ಫೋಟೋವನ್ನು ಪೋಸ್ಟ್‌ ಮಾಡಲಾಗಿದೆ. ‘ಇದು ಎಲ್ಲಿಯ ಫೋಟೋ’ ಎಂದು ಬಂದಿರುವ ಕಮೆಂಟ್‌ಗೆ ‘ಇದು ನನ್ನ ಡಿಜಿಟಲ್‌ ಕಲಾಕೃತಿ’ ಎಂದು ಕಲಾವಿದ ಪ್ರತಿಕ್ರಿಯೆ ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ಹುಡುಕಾಡಿದಾಗ ಫೋಟೋಗ್ರಾಫರ್‌ Meiqianbao ಅವರು ಕ್ಲಿಕ್ಕಿಸಿರುವ ಫೋಟೋವೊಂದು ಗೂಗಲ್‌ನಲ್ಲಿ ಸಿಕ್ಕಿದ್ದು, ಅದು ಚಂದ್ರು ಅವರ ಕಲಾಕೃತಿಗೆ ಪ್ರೇರಣೆಯಾಗಿರುವ ಫೋಟೋವಾಗಿರಬಹುದು. ಎರಡು ಚಿತ್ರಗಳನ್ನು ಎಚ್ಚರಿಕೆಯಿಂದ ಗಮನಿಸಿದರೆ ಎರಡೂ ಫೋಟೋಗಳಲ್ಲಿನ ಹೋಲಿಕೆಯನ್ನು ಗುರುತಿಸಬಹುದು ಎಂದು ಆಲ್ಟ್‌ ನ್ಯೂಸ್‌ ಹೇಳಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಅಮೆರಿಕ ಮೂಲದ ಫೋಟೋ ಶೇಖರಣಾ ಏಜೆನ್ಸಿಯಾದ ‘ಶಟ್ಟರ್‌ಸ್ಟಾಕ್‌’ ಪ್ರಕಾರ, ಚೀನಾದ ಹೆನಾನ್‌‌ನ ಲುವೊಯಾಂಗ್ನಲ್ಲಿರುವ ಲಾಂಗ್‌ಮೆನ್ ಗ್ರೊಟ್ಟೋಸ್ -ಫೆಂಗ್‌ಕ್ಸಿಯಾಂಗ್ ದೇವಾಲಯದ ಕಲ್ಲಿನ ಬುದ್ಧ ವಿಗ್ರಹ ಇದಾಗಿದೆ.

ಆದರೆ ಈ ಫೋಟೋ ರಾಯಚೂರಿನಲ್ಲಿ ಮಸೀದಿಯನ್ನು ದ್ವಂಸ ಮಾಡಿದಾಗ ಸಿಕ್ಕ ದೇವಾಲಯದ ಫೋಟೋವೆಂದು ಹಬ್ಬಿಸಲಾಗುತ್ತಿದೆ.  “ಇದು ನಮ್ಮನ್ನು ಮತ್ತೊಂದು ಪ್ರಶ್ನೆಗೆ ಹಚ್ಚಿತು- ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಯಿತೇ” ಎಂದು ಪರಿಶೀಲನೆ ಮುಂದುವರಿಸಿರುವ ಆಲ್ಟ್‌ ನ್ಯೂಸ್‌ನವರು, ಫೇಕ್‌ ನ್ಯೂಸ್‌ ಕಾರ್ಖಾನೆಗಳನ್ನು ಶೋಧಿಸಿದ್ದಾರೆ.

2016ರಿಂದಲೂ ಇದೇ ಡಿಜಿಟಲ್‌ ಕಲೆಯನ್ನು ಹಂಚಿಕೊಂಡಿರುವುದು ತಿಳಿದುಬಂದಿದೆ. ಉಮಾ ಗಾರ್ಗಿ ಎಂಬವವರು ಮೂರು ವರ್ಷದ ಹಿಂದೆಯೇ ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

ಇದೇ ರೀತಿಯಲ್ಲಿ ಅನೇಕರು ಟ್ವೀಟ್‌ ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ರಮಣಿ ಪರಶುರಾಮನ್‌ ಅವರು ಮೊದಲು ಹಂಚಿಕೊಂಡಿದ್ದಾರೆ.

2016ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಬಹುತೇಕ ಒಂದೇ ರೀತಿಯ ಪಠ್ಯವನ್ನು ಹೊಂದಿರುವ ವಿಭಿನ್ನ ಚಿತ್ರಗಳನ್ನು ನಾವು ಕಂಡುಕೊಂಡಿದ್ದೇವೆ ಎಂದು ಆಲ್ಟ್‌ ನ್ಯೂಸ್ ಹೇಳಿದೆ.

ಫೇಕ್‌ನ್ಯೂಸ್‌ ವೆಬ್‌ಸೈಟ್ ಆಗಿರುವ ‘ಪೋಸ್ಟ್‌ಕಾರ್ಡ್‌’ ಸಂಸ್ಥಾಪಕ ಮಹೇಶ್‌ ವಿಕ್ರಮ್‌ ಹೆಗ್ಡೆ ಹಾಗೂ ಕೆ.ಪಿ.ಗಣೇಶ್‌ (ಪ್ರಧಾನಿ ಮೋದಿಯವರು ಟ್ವಿಟ್ಟರ್‌‌ನಲ್ಲಿ ಅನುಸರಿಸುತ್ತಿರುವವರು), ರಸ್ತೆ ಅಗಲೀಕರಣಕ್ಕಾಗಿ ಮಸೀದಿ ದ್ವಂಸ ಮಾಡಿದಾಗ ರಾಯಚೂರಿನಲ್ಲಿ ದೇವಾಲಯ ಪತ್ತೆಯಾಗಿದೆ ಎಂದು  ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ಮುಕ್ತ್‌ಭಾರತ್‌ ಟ್ವಿಟರ್‌‌ ಖಾತೆಯಲ್ಲಿ ಇದೇ ಒಕ್ಕಣೆಯೊಂದಿಗೆ ಏಪ್ರಿಲ್‌ 11, 2016ರಂದು ಫೋಟೋವನ್ನು ಟ್ವೀಟ್‌ ಮಾಡಲಾಗಿದೆ.  ಇದು 150ಕ್ಕೂ ಹೆಚ್ಚು ಬಾರಿ ರೀ ಟ್ವೀಟ್ ಆಗಿದೆ. ‘Struggle for Hindu Existence’ ಎಂಬ ವೆಬ್‌ಸೈಟ್‌ನಲ್ಲಿ ಲೇಖನವನ್ನೂ ಇದೇ ಅಭಿಪ್ರಾಯ ಮೂಡುವಂತೆ ಬರೆಯಲಾಗಿದೆ.

2016ರಲ್ಲಿ ರಸ್ತೆ ಅಗಲೀಕರಣ ಮಾಡಲು ಆದೇಶಿಸಿದ್ದ ಹಿಂದಿನ ಜಿಲ್ಲಾಧಿಕಾರಿಯನ್ನು ಆಲ್ಟ್‌ ನ್ಯೂಸ್ ಸಂಪರ್ಕಿಸಿದ್ದು ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ.

“ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ಮಾಹಿತಿಯು ಸುಳ್ಳಾಗಿದೆ. ತೆರವು ಕಾರ್ಯಾಚರಣೆಯಲ್ಲಿ ಕೆಲವು ಸಾಂಪ್ರದಾಯಿಕ ಕಟ್ಟಡಗಳೂ ಇದ್ದವು. ಅತ್ಯಂತ ಹಳೆಯ ಮಾದರಿಯಲ್ಲಿದ್ದ ಎಕ್‌ಮಿನಾರ್‌ ಅನ್ನು ತೆರೆವುಗೊಳಿಸಲಾಯಿತು. ಅಂತಹ ಹಳೆಯ ರಚನೆಗಳು ವಿವಿಧ ಕೆತ್ತನೆಗಳನ್ನು ಹೊಂದಿವೆ. ಕೇವಲ ಒಂದು ಕಂಬದಿಂದಾಗಿ ಇದು ಹಿಂದೆ ದೇವಾಲಯವಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಕೆಲವು ಗುಂಪುಗಳು ಈ ರೀತಿ ಬಿಂಬಿಸಲು ಯತ್ನಿಸಿದವು. ಪ್ರತಿಕ್ರಿಯೆಗಳು ಬಂದಾಗ ಅವರು ತಮ್ಮ ಪ್ರತಿಪಾದನೆಯನ್ನು ನಿಲ್ಲಿಸಿದರು” ಎಂದು ಆಲ್ಟ್‌ ನ್ಯೂಸ್‌ಗೆ ಅಂದಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಇದು ಅಯೋಧ್ಯೆ ರೈಲು ನಿಲ್ದಾಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...