Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...