Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...