Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...