Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...