Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...