Homeಕರ್ನಾಟಕಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಟಿವಿ9 ಸೇರಿದಂತೆ ಹಲವು ಕನ್ನಡದ ಮಾಧ್ಯಮಗಳು ಇದನ್ನು ‘ತಪ್ಪಾಗಿ’ ವರದಿ ಮಾಡಿವೆ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ನಟನ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಾಕಿಸ್ತಾನಿ ಯುವಕನೊಬ್ಬ ಹಾಡಿರುವ “ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ” ಕನ್ನಡ ಹಾಡೊಂಡು ವೈರಲ್‌ ಆಗಿದ್ದು, ಕನ್ನಡದ ಪ್ರಮುಖ ಮಾಧ್ಯಮವಾದ ಟಿವಿ9 “ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ” ಎಂದು ಸುದ್ದಿ ಮಾಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲದೆ ತನ್ನ ಯೂಟ್ಯೂಬ್ ಚಾನೆಲ್‌ನಲ್ಲೂ ಅದೇ ಸುದ್ದಿಯ ವಿಡಿಯೊ ವರದಿ ಮಾಡಿದ್ದು, “ಅಪ್ಪು ನಿಧನಕ್ಕೆ ಪಾಕಿಸ್ತಾನ ಅಭಿಮಾನಿಯ ಸಂತಾಪ” ಎಂದು ಶೀರ್ಷಿಕೆ ನೀಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಟಿವಿ9 ಈ ವಿಡಿಯೊವನ್ನು ನಮ್ ರೇಡಿಯೊ’ ಎಂಬ ಯೂಟ್ಯೂಬ್ ಚಾನೆಲ್‌ನಿಂದ ಪಡೆದಿದ್ದು, ನಮ್‌ ರೇಡಿಯೊ ಇದನ್ನು ಪುನೀತ್‌ ರಾಜ್‌ಕುಮಾರ್‌ ನಿಧನ ಹೊಂದಿದ ಆಕ್ಟೋಬರ್‌ 29 ರಂದು ತನ್ನ ಚಾನೆಲ್‌ಗೆ, “ಪುನೀತ್‌ ರಾಜ್‌ಕುಮಾರ್‌ ಅವರ ಪಾಕಿಸ್ತಾನದ ಅಭಿಮಾನಿ” ಎಂಬ ಶೀರ್ಷಿಕೆ ನೀಡಿ ಅಪ್ಲೋಡ್ ಮಾಡಿತ್ತು.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ).

ಪುನೀತ್‌ ರಾಜ್‌ಕುಮಾರ್‌ ಅವರ ನಿಧನಕ್ಕೆ ಪಾಕಿಸ್ತಾನದ ಯುವ ಅಭಿಮಾನಿ ಗಾನ ನಮನ ಸಲ್ಲಿಸಿದ್ದಾರೆ ಎಂದು ಹಲವು ಕನ್ನಡದ ಚಾನೆಲ್‌ಗಳು, ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

OnePlus News Kannada’ ಎಂಬ ಚಾನೆಲ್‌, ‘ಅಪ್ಪುಗಾಗಿ ಪಾಕಿಸ್ತಾನಿ ಅಭಿಮಾನಿ ಹಾಡಿದ!’ ಎಂದು ಶೀರ್ಷಿಕೆ ನೀಡಿ ವಿಡಯೊ ವರದಿ ಮಾಡಿದೆ. ಸುಮಾರು ಏಳು ಲಕ್ಷ ಚಂದಾದಾರರನ್ನು ಹೊಂದಿರುವ Karnataka TV ಎಂಬ ಯೂಟ್ಯೂಬ್ ಚಾನೆಲ್‌, ‘ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ’ ಎಂಬ ಶೀರ್ಷಿಕೆ ನೀಡಿ ವರದಿ ಮಾಡಿದೆ. ಇಷ್ಟೇ ಅಲ್ಲದೆ ಹಲವಾರು ಜನರು ಬೇರೆ ಬೇರೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಇದೇ ರೀತಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಯುವಕ ಪುನೀತ್‌ ಅವರಿಗೆ ‘ಶ್ರದ್ದಾಂಜಲಿ ಕೋರಿ’ ಬೊಂಬೆ ಹೇಳುತೈತೆ ಹಾಡಿದರೇ?

ವಿಡಿಯೊದಲ್ಲಿ ಇರುವ ಯುವಕನ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್‌ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದೆ. ಈ ವೇಳೆ ನಮಗೆ ಅಜ್ಮಲ್ ಮುಘಲ್ ಎಂಬ ಯೂಟ್ಯಬ್‌ ಚಾನೆಲ್‌ ಸಿಕ್ಕಿದೆ. ಅಜ್ಮಲ್ ಮುಘಲ್ ಅವರ ಬಗ್ಗೆ ನಾವು ಮತ್ತಷ್ಟು ಹುಡುಕಿದ್ದು ಅವರ ಇನ್‌ಸ್ಟಾಗ್ರಾಂ ಪ್ರೋಫೈಲ್ ಸಿಕ್ಕಿದೆ. ಅದರಲ್ಲಿ ಅವರು ತಾನೊಬ್ಬ ಸಂಗೀತಗಾರ ಎಂದು ಹೇಳಿಕೊಂಡಿದ್ದಾರೆ.

ಅಜ್ಮಲ್ ಮುಘಲ್ ತನ್ನ ಯೂಟ್ಯೂಬ್ ಚಾನೆಲ್‌ ಅನ್ನು 2012 ರ ಜೂನ್ 11 ರಂದು ಪ್ರಾರಂಭಿಸಿದ್ದರು. ಅಜ್ಮಲ್ ತನ್ನ ಚಾನೆಲ್‌ನಲ್ಲಿ ಒಟ್ಟು 18 ವಿಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ತನ್ನ ಚಾನೆಲ್‌ನಲ್ಲಿ ಅವರು ಅಪ್ಲೋಡ್‌ ಮಾಡಿದ್ದ ಹಾಡು ಪುನೀತ್ ಅಭಿನಯದ ‘ಮಿಲನ’ ಚಿತ್ರದ ನಿನ್ನಿಂದಲೇ ಹಾಡನ್ನು ಹಾಡಿದ್ದಾರೆ. ಅಜ್ಮಲ್ ತನ್ನ ಚಾನೆಲ್‌ನಲ್ಲಿ ‘ಮುಂಗಾರು ಮಳೆ’, ‘ಮುಗುಳುನಗೆ’, ‘ಗೆಳೆಯ’, ‘ಗಾಳಿಪಟ’ ಚಿತ್ರಗಳ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ: Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ಅದರಂತೆ ಬೊಂಬೆ ಹೇಳುತೈತೆ ಹಾಡನ್ನು ಮೂರು ವರ್ಷಗಳ ಹಿಂದೆ 2018 ರ ಜನವರಿ 12 ರಂದು ತನ್ನ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದರು.

ಅಜ್ಮಲ್ ಮುಘಲ್ ಈ ಈ ಹಾಡಿನ ವಿವರಣೆಯಲ್ಲಿ, “ನಾನೊಬ್ಬ ಪಾಕಿಸ್ತಾನಿಯಾಗಿದ್ದು, ಕನ್ನಡವು ಕಠಿಣ ಮತ್ತು ಮಧುರವಾದ ಭಾಷೆಯಾಗಿದೆ. ಅದನ್ನು ನಾನು ಚೆನ್ನಾಗಿ ಹಾಡಲು ಇಷ್ಟಪಡುತ್ತೇನೆ. ಮತ್ತೊಂದು ವಿಷಯವೇನೆಂದರೆ, ನನಗೆ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ನಾನಿದನ್ನು ಆನಂದಿಸುತ್ತೇನೆ’’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಅಜ್ಮಲ್‌ ಇದೇ ಹಾಡನ್ನು 2017 ಮೇ 14 ರಂದು ಸಹ ಹಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದರು.

ಈ ಹಾಡನ್ನೇ ಕನ್ನಡದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಮಾಧ್ಯಮಗಳು ತೆಗೆದುಕೊಂಡು, ‘ಪಾಕಿಸ್ತಾನಿ ಯುವಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ’ ಎಂದು ತಪ್ಪಾಗಿ ವರದಿ ಮಾಡಿವೆ.

ಒಟ್ಟಿನಲ್ಲಿ ಹೇಳುವುದೇನೆಂದರೆ, ಯುವಕ ಪಾಕಿಸ್ತಾನಿ ಎಂಬುವುದು ನಿಜವೇ ಆಗಿದೆ. ಪಾಕಿಸ್ತಾನದ ಲಾಹೋರ್‌ನ ಐತಿಹಾಸಿಕ ಸ್ಥಳವಾದ ‘ಮಿನಾರ್‌-ಇ-ಪಾಕಿಸ್ತಾನ’ ಸ್ಥಂಭದ ಮುಂದೆಯೆ ವಿಡಿಯೊ ಮಾಡಿದ್ದಾರೆ. ಆದರೆ ಕನ್ನಡ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಅವರು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮೂರು ವರ್ಷಗಳ ಹಿಂದೆಯೆ ಅಪ್‌ಲೋಡ್ ಮಾಡಿದ್ದರು.

ನಾನುಗೌರಿ.ಕಾಂ ಪಾಕಿಸ್ತಾನಿ ಯುವಕ ಅಜ್ಮಲ್ ಅವರನ್ನು ವಿಡಿಯೋ ಕಾಲ್ ಮತ್ತು ಫೋನ್ ಕರೆ ಮೂಲಕ ಸಂಪರ್ಕಿಸಿತು. ಆದರೆ ನೆಟ್‌ವರ್ಕ್‌ ಕಾರಣಗಳಿಗಾಗಿ ಸಂವಹನ ಸಾಧ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣ ಅವರ ಪ್ರತಿಕ್ರಿಯೆಯನ್ನೂ ಇಲ್ಲಿ ಅಪ್ಡೇಟ್ ಮಾಡುತ್ತೇವೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...