Homeಕರ್ನಾಟಕಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಟಿವಿ9 ಸೇರಿದಂತೆ ಹಲವು ಕನ್ನಡದ ಮಾಧ್ಯಮಗಳು ಇದನ್ನು ‘ತಪ್ಪಾಗಿ’ ವರದಿ ಮಾಡಿವೆ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ನಟನ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಾಕಿಸ್ತಾನಿ ಯುವಕನೊಬ್ಬ ಹಾಡಿರುವ “ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ” ಕನ್ನಡ ಹಾಡೊಂಡು ವೈರಲ್‌ ಆಗಿದ್ದು, ಕನ್ನಡದ ಪ್ರಮುಖ ಮಾಧ್ಯಮವಾದ ಟಿವಿ9 “ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ” ಎಂದು ಸುದ್ದಿ ಮಾಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲದೆ ತನ್ನ ಯೂಟ್ಯೂಬ್ ಚಾನೆಲ್‌ನಲ್ಲೂ ಅದೇ ಸುದ್ದಿಯ ವಿಡಿಯೊ ವರದಿ ಮಾಡಿದ್ದು, “ಅಪ್ಪು ನಿಧನಕ್ಕೆ ಪಾಕಿಸ್ತಾನ ಅಭಿಮಾನಿಯ ಸಂತಾಪ” ಎಂದು ಶೀರ್ಷಿಕೆ ನೀಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಟಿವಿ9 ಈ ವಿಡಿಯೊವನ್ನು ನಮ್ ರೇಡಿಯೊ’ ಎಂಬ ಯೂಟ್ಯೂಬ್ ಚಾನೆಲ್‌ನಿಂದ ಪಡೆದಿದ್ದು, ನಮ್‌ ರೇಡಿಯೊ ಇದನ್ನು ಪುನೀತ್‌ ರಾಜ್‌ಕುಮಾರ್‌ ನಿಧನ ಹೊಂದಿದ ಆಕ್ಟೋಬರ್‌ 29 ರಂದು ತನ್ನ ಚಾನೆಲ್‌ಗೆ, “ಪುನೀತ್‌ ರಾಜ್‌ಕುಮಾರ್‌ ಅವರ ಪಾಕಿಸ್ತಾನದ ಅಭಿಮಾನಿ” ಎಂಬ ಶೀರ್ಷಿಕೆ ನೀಡಿ ಅಪ್ಲೋಡ್ ಮಾಡಿತ್ತು.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ).

ಪುನೀತ್‌ ರಾಜ್‌ಕುಮಾರ್‌ ಅವರ ನಿಧನಕ್ಕೆ ಪಾಕಿಸ್ತಾನದ ಯುವ ಅಭಿಮಾನಿ ಗಾನ ನಮನ ಸಲ್ಲಿಸಿದ್ದಾರೆ ಎಂದು ಹಲವು ಕನ್ನಡದ ಚಾನೆಲ್‌ಗಳು, ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

OnePlus News Kannada’ ಎಂಬ ಚಾನೆಲ್‌, ‘ಅಪ್ಪುಗಾಗಿ ಪಾಕಿಸ್ತಾನಿ ಅಭಿಮಾನಿ ಹಾಡಿದ!’ ಎಂದು ಶೀರ್ಷಿಕೆ ನೀಡಿ ವಿಡಯೊ ವರದಿ ಮಾಡಿದೆ. ಸುಮಾರು ಏಳು ಲಕ್ಷ ಚಂದಾದಾರರನ್ನು ಹೊಂದಿರುವ Karnataka TV ಎಂಬ ಯೂಟ್ಯೂಬ್ ಚಾನೆಲ್‌, ‘ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ’ ಎಂಬ ಶೀರ್ಷಿಕೆ ನೀಡಿ ವರದಿ ಮಾಡಿದೆ. ಇಷ್ಟೇ ಅಲ್ಲದೆ ಹಲವಾರು ಜನರು ಬೇರೆ ಬೇರೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಇದೇ ರೀತಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಯುವಕ ಪುನೀತ್‌ ಅವರಿಗೆ ‘ಶ್ರದ್ದಾಂಜಲಿ ಕೋರಿ’ ಬೊಂಬೆ ಹೇಳುತೈತೆ ಹಾಡಿದರೇ?

ವಿಡಿಯೊದಲ್ಲಿ ಇರುವ ಯುವಕನ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್‌ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದೆ. ಈ ವೇಳೆ ನಮಗೆ ಅಜ್ಮಲ್ ಮುಘಲ್ ಎಂಬ ಯೂಟ್ಯಬ್‌ ಚಾನೆಲ್‌ ಸಿಕ್ಕಿದೆ. ಅಜ್ಮಲ್ ಮುಘಲ್ ಅವರ ಬಗ್ಗೆ ನಾವು ಮತ್ತಷ್ಟು ಹುಡುಕಿದ್ದು ಅವರ ಇನ್‌ಸ್ಟಾಗ್ರಾಂ ಪ್ರೋಫೈಲ್ ಸಿಕ್ಕಿದೆ. ಅದರಲ್ಲಿ ಅವರು ತಾನೊಬ್ಬ ಸಂಗೀತಗಾರ ಎಂದು ಹೇಳಿಕೊಂಡಿದ್ದಾರೆ.

ಅಜ್ಮಲ್ ಮುಘಲ್ ತನ್ನ ಯೂಟ್ಯೂಬ್ ಚಾನೆಲ್‌ ಅನ್ನು 2012 ರ ಜೂನ್ 11 ರಂದು ಪ್ರಾರಂಭಿಸಿದ್ದರು. ಅಜ್ಮಲ್ ತನ್ನ ಚಾನೆಲ್‌ನಲ್ಲಿ ಒಟ್ಟು 18 ವಿಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ತನ್ನ ಚಾನೆಲ್‌ನಲ್ಲಿ ಅವರು ಅಪ್ಲೋಡ್‌ ಮಾಡಿದ್ದ ಹಾಡು ಪುನೀತ್ ಅಭಿನಯದ ‘ಮಿಲನ’ ಚಿತ್ರದ ನಿನ್ನಿಂದಲೇ ಹಾಡನ್ನು ಹಾಡಿದ್ದಾರೆ. ಅಜ್ಮಲ್ ತನ್ನ ಚಾನೆಲ್‌ನಲ್ಲಿ ‘ಮುಂಗಾರು ಮಳೆ’, ‘ಮುಗುಳುನಗೆ’, ‘ಗೆಳೆಯ’, ‘ಗಾಳಿಪಟ’ ಚಿತ್ರಗಳ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ: Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ಅದರಂತೆ ಬೊಂಬೆ ಹೇಳುತೈತೆ ಹಾಡನ್ನು ಮೂರು ವರ್ಷಗಳ ಹಿಂದೆ 2018 ರ ಜನವರಿ 12 ರಂದು ತನ್ನ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದರು.

ಅಜ್ಮಲ್ ಮುಘಲ್ ಈ ಈ ಹಾಡಿನ ವಿವರಣೆಯಲ್ಲಿ, “ನಾನೊಬ್ಬ ಪಾಕಿಸ್ತಾನಿಯಾಗಿದ್ದು, ಕನ್ನಡವು ಕಠಿಣ ಮತ್ತು ಮಧುರವಾದ ಭಾಷೆಯಾಗಿದೆ. ಅದನ್ನು ನಾನು ಚೆನ್ನಾಗಿ ಹಾಡಲು ಇಷ್ಟಪಡುತ್ತೇನೆ. ಮತ್ತೊಂದು ವಿಷಯವೇನೆಂದರೆ, ನನಗೆ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ನಾನಿದನ್ನು ಆನಂದಿಸುತ್ತೇನೆ’’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಅಜ್ಮಲ್‌ ಇದೇ ಹಾಡನ್ನು 2017 ಮೇ 14 ರಂದು ಸಹ ಹಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದರು.

ಈ ಹಾಡನ್ನೇ ಕನ್ನಡದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಮಾಧ್ಯಮಗಳು ತೆಗೆದುಕೊಂಡು, ‘ಪಾಕಿಸ್ತಾನಿ ಯುವಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ’ ಎಂದು ತಪ್ಪಾಗಿ ವರದಿ ಮಾಡಿವೆ.

ಒಟ್ಟಿನಲ್ಲಿ ಹೇಳುವುದೇನೆಂದರೆ, ಯುವಕ ಪಾಕಿಸ್ತಾನಿ ಎಂಬುವುದು ನಿಜವೇ ಆಗಿದೆ. ಪಾಕಿಸ್ತಾನದ ಲಾಹೋರ್‌ನ ಐತಿಹಾಸಿಕ ಸ್ಥಳವಾದ ‘ಮಿನಾರ್‌-ಇ-ಪಾಕಿಸ್ತಾನ’ ಸ್ಥಂಭದ ಮುಂದೆಯೆ ವಿಡಿಯೊ ಮಾಡಿದ್ದಾರೆ. ಆದರೆ ಕನ್ನಡ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಅವರು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮೂರು ವರ್ಷಗಳ ಹಿಂದೆಯೆ ಅಪ್‌ಲೋಡ್ ಮಾಡಿದ್ದರು.

ನಾನುಗೌರಿ.ಕಾಂ ಪಾಕಿಸ್ತಾನಿ ಯುವಕ ಅಜ್ಮಲ್ ಅವರನ್ನು ವಿಡಿಯೋ ಕಾಲ್ ಮತ್ತು ಫೋನ್ ಕರೆ ಮೂಲಕ ಸಂಪರ್ಕಿಸಿತು. ಆದರೆ ನೆಟ್‌ವರ್ಕ್‌ ಕಾರಣಗಳಿಗಾಗಿ ಸಂವಹನ ಸಾಧ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣ ಅವರ ಪ್ರತಿಕ್ರಿಯೆಯನ್ನೂ ಇಲ್ಲಿ ಅಪ್ಡೇಟ್ ಮಾಡುತ್ತೇವೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...