Homeಕರ್ನಾಟಕಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಟಿವಿ9 ಸೇರಿದಂತೆ ಹಲವು ಕನ್ನಡದ ಮಾಧ್ಯಮಗಳು ಇದನ್ನು ‘ತಪ್ಪಾಗಿ’ ವರದಿ ಮಾಡಿವೆ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ನಟನ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಾಕಿಸ್ತಾನಿ ಯುವಕನೊಬ್ಬ ಹಾಡಿರುವ “ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ” ಕನ್ನಡ ಹಾಡೊಂಡು ವೈರಲ್‌ ಆಗಿದ್ದು, ಕನ್ನಡದ ಪ್ರಮುಖ ಮಾಧ್ಯಮವಾದ ಟಿವಿ9 “ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ” ಎಂದು ಸುದ್ದಿ ಮಾಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲದೆ ತನ್ನ ಯೂಟ್ಯೂಬ್ ಚಾನೆಲ್‌ನಲ್ಲೂ ಅದೇ ಸುದ್ದಿಯ ವಿಡಿಯೊ ವರದಿ ಮಾಡಿದ್ದು, “ಅಪ್ಪು ನಿಧನಕ್ಕೆ ಪಾಕಿಸ್ತಾನ ಅಭಿಮಾನಿಯ ಸಂತಾಪ” ಎಂದು ಶೀರ್ಷಿಕೆ ನೀಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಟಿವಿ9 ಈ ವಿಡಿಯೊವನ್ನು ನಮ್ ರೇಡಿಯೊ’ ಎಂಬ ಯೂಟ್ಯೂಬ್ ಚಾನೆಲ್‌ನಿಂದ ಪಡೆದಿದ್ದು, ನಮ್‌ ರೇಡಿಯೊ ಇದನ್ನು ಪುನೀತ್‌ ರಾಜ್‌ಕುಮಾರ್‌ ನಿಧನ ಹೊಂದಿದ ಆಕ್ಟೋಬರ್‌ 29 ರಂದು ತನ್ನ ಚಾನೆಲ್‌ಗೆ, “ಪುನೀತ್‌ ರಾಜ್‌ಕುಮಾರ್‌ ಅವರ ಪಾಕಿಸ್ತಾನದ ಅಭಿಮಾನಿ” ಎಂಬ ಶೀರ್ಷಿಕೆ ನೀಡಿ ಅಪ್ಲೋಡ್ ಮಾಡಿತ್ತು.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ).

ಪುನೀತ್‌ ರಾಜ್‌ಕುಮಾರ್‌ ಅವರ ನಿಧನಕ್ಕೆ ಪಾಕಿಸ್ತಾನದ ಯುವ ಅಭಿಮಾನಿ ಗಾನ ನಮನ ಸಲ್ಲಿಸಿದ್ದಾರೆ ಎಂದು ಹಲವು ಕನ್ನಡದ ಚಾನೆಲ್‌ಗಳು, ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

OnePlus News Kannada’ ಎಂಬ ಚಾನೆಲ್‌, ‘ಅಪ್ಪುಗಾಗಿ ಪಾಕಿಸ್ತಾನಿ ಅಭಿಮಾನಿ ಹಾಡಿದ!’ ಎಂದು ಶೀರ್ಷಿಕೆ ನೀಡಿ ವಿಡಯೊ ವರದಿ ಮಾಡಿದೆ. ಸುಮಾರು ಏಳು ಲಕ್ಷ ಚಂದಾದಾರರನ್ನು ಹೊಂದಿರುವ Karnataka TV ಎಂಬ ಯೂಟ್ಯೂಬ್ ಚಾನೆಲ್‌, ‘ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ’ ಎಂಬ ಶೀರ್ಷಿಕೆ ನೀಡಿ ವರದಿ ಮಾಡಿದೆ. ಇಷ್ಟೇ ಅಲ್ಲದೆ ಹಲವಾರು ಜನರು ಬೇರೆ ಬೇರೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಇದೇ ರೀತಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಯುವಕ ಪುನೀತ್‌ ಅವರಿಗೆ ‘ಶ್ರದ್ದಾಂಜಲಿ ಕೋರಿ’ ಬೊಂಬೆ ಹೇಳುತೈತೆ ಹಾಡಿದರೇ?

ವಿಡಿಯೊದಲ್ಲಿ ಇರುವ ಯುವಕನ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್‌ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದೆ. ಈ ವೇಳೆ ನಮಗೆ ಅಜ್ಮಲ್ ಮುಘಲ್ ಎಂಬ ಯೂಟ್ಯಬ್‌ ಚಾನೆಲ್‌ ಸಿಕ್ಕಿದೆ. ಅಜ್ಮಲ್ ಮುಘಲ್ ಅವರ ಬಗ್ಗೆ ನಾವು ಮತ್ತಷ್ಟು ಹುಡುಕಿದ್ದು ಅವರ ಇನ್‌ಸ್ಟಾಗ್ರಾಂ ಪ್ರೋಫೈಲ್ ಸಿಕ್ಕಿದೆ. ಅದರಲ್ಲಿ ಅವರು ತಾನೊಬ್ಬ ಸಂಗೀತಗಾರ ಎಂದು ಹೇಳಿಕೊಂಡಿದ್ದಾರೆ.

ಅಜ್ಮಲ್ ಮುಘಲ್ ತನ್ನ ಯೂಟ್ಯೂಬ್ ಚಾನೆಲ್‌ ಅನ್ನು 2012 ರ ಜೂನ್ 11 ರಂದು ಪ್ರಾರಂಭಿಸಿದ್ದರು. ಅಜ್ಮಲ್ ತನ್ನ ಚಾನೆಲ್‌ನಲ್ಲಿ ಒಟ್ಟು 18 ವಿಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ತನ್ನ ಚಾನೆಲ್‌ನಲ್ಲಿ ಅವರು ಅಪ್ಲೋಡ್‌ ಮಾಡಿದ್ದ ಹಾಡು ಪುನೀತ್ ಅಭಿನಯದ ‘ಮಿಲನ’ ಚಿತ್ರದ ನಿನ್ನಿಂದಲೇ ಹಾಡನ್ನು ಹಾಡಿದ್ದಾರೆ. ಅಜ್ಮಲ್ ತನ್ನ ಚಾನೆಲ್‌ನಲ್ಲಿ ‘ಮುಂಗಾರು ಮಳೆ’, ‘ಮುಗುಳುನಗೆ’, ‘ಗೆಳೆಯ’, ‘ಗಾಳಿಪಟ’ ಚಿತ್ರಗಳ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ: Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ಅದರಂತೆ ಬೊಂಬೆ ಹೇಳುತೈತೆ ಹಾಡನ್ನು ಮೂರು ವರ್ಷಗಳ ಹಿಂದೆ 2018 ರ ಜನವರಿ 12 ರಂದು ತನ್ನ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದರು.

ಅಜ್ಮಲ್ ಮುಘಲ್ ಈ ಈ ಹಾಡಿನ ವಿವರಣೆಯಲ್ಲಿ, “ನಾನೊಬ್ಬ ಪಾಕಿಸ್ತಾನಿಯಾಗಿದ್ದು, ಕನ್ನಡವು ಕಠಿಣ ಮತ್ತು ಮಧುರವಾದ ಭಾಷೆಯಾಗಿದೆ. ಅದನ್ನು ನಾನು ಚೆನ್ನಾಗಿ ಹಾಡಲು ಇಷ್ಟಪಡುತ್ತೇನೆ. ಮತ್ತೊಂದು ವಿಷಯವೇನೆಂದರೆ, ನನಗೆ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ನಾನಿದನ್ನು ಆನಂದಿಸುತ್ತೇನೆ’’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಅಜ್ಮಲ್‌ ಇದೇ ಹಾಡನ್ನು 2017 ಮೇ 14 ರಂದು ಸಹ ಹಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದರು.

ಈ ಹಾಡನ್ನೇ ಕನ್ನಡದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಮಾಧ್ಯಮಗಳು ತೆಗೆದುಕೊಂಡು, ‘ಪಾಕಿಸ್ತಾನಿ ಯುವಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ’ ಎಂದು ತಪ್ಪಾಗಿ ವರದಿ ಮಾಡಿವೆ.

ಒಟ್ಟಿನಲ್ಲಿ ಹೇಳುವುದೇನೆಂದರೆ, ಯುವಕ ಪಾಕಿಸ್ತಾನಿ ಎಂಬುವುದು ನಿಜವೇ ಆಗಿದೆ. ಪಾಕಿಸ್ತಾನದ ಲಾಹೋರ್‌ನ ಐತಿಹಾಸಿಕ ಸ್ಥಳವಾದ ‘ಮಿನಾರ್‌-ಇ-ಪಾಕಿಸ್ತಾನ’ ಸ್ಥಂಭದ ಮುಂದೆಯೆ ವಿಡಿಯೊ ಮಾಡಿದ್ದಾರೆ. ಆದರೆ ಕನ್ನಡ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಅವರು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮೂರು ವರ್ಷಗಳ ಹಿಂದೆಯೆ ಅಪ್‌ಲೋಡ್ ಮಾಡಿದ್ದರು.

ನಾನುಗೌರಿ.ಕಾಂ ಪಾಕಿಸ್ತಾನಿ ಯುವಕ ಅಜ್ಮಲ್ ಅವರನ್ನು ವಿಡಿಯೋ ಕಾಲ್ ಮತ್ತು ಫೋನ್ ಕರೆ ಮೂಲಕ ಸಂಪರ್ಕಿಸಿತು. ಆದರೆ ನೆಟ್‌ವರ್ಕ್‌ ಕಾರಣಗಳಿಗಾಗಿ ಸಂವಹನ ಸಾಧ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣ ಅವರ ಪ್ರತಿಕ್ರಿಯೆಯನ್ನೂ ಇಲ್ಲಿ ಅಪ್ಡೇಟ್ ಮಾಡುತ್ತೇವೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...