Homeಕರ್ನಾಟಕಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಟಿವಿ9 ಸೇರಿದಂತೆ ಹಲವು ಕನ್ನಡದ ಮಾಧ್ಯಮಗಳು ಇದನ್ನು ‘ತಪ್ಪಾಗಿ’ ವರದಿ ಮಾಡಿವೆ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ನಟನ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಾಕಿಸ್ತಾನಿ ಯುವಕನೊಬ್ಬ ಹಾಡಿರುವ “ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ” ಕನ್ನಡ ಹಾಡೊಂಡು ವೈರಲ್‌ ಆಗಿದ್ದು, ಕನ್ನಡದ ಪ್ರಮುಖ ಮಾಧ್ಯಮವಾದ ಟಿವಿ9 “ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ” ಎಂದು ಸುದ್ದಿ ಮಾಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲದೆ ತನ್ನ ಯೂಟ್ಯೂಬ್ ಚಾನೆಲ್‌ನಲ್ಲೂ ಅದೇ ಸುದ್ದಿಯ ವಿಡಿಯೊ ವರದಿ ಮಾಡಿದ್ದು, “ಅಪ್ಪು ನಿಧನಕ್ಕೆ ಪಾಕಿಸ್ತಾನ ಅಭಿಮಾನಿಯ ಸಂತಾಪ” ಎಂದು ಶೀರ್ಷಿಕೆ ನೀಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಟಿವಿ9 ಈ ವಿಡಿಯೊವನ್ನು ನಮ್ ರೇಡಿಯೊ’ ಎಂಬ ಯೂಟ್ಯೂಬ್ ಚಾನೆಲ್‌ನಿಂದ ಪಡೆದಿದ್ದು, ನಮ್‌ ರೇಡಿಯೊ ಇದನ್ನು ಪುನೀತ್‌ ರಾಜ್‌ಕುಮಾರ್‌ ನಿಧನ ಹೊಂದಿದ ಆಕ್ಟೋಬರ್‌ 29 ರಂದು ತನ್ನ ಚಾನೆಲ್‌ಗೆ, “ಪುನೀತ್‌ ರಾಜ್‌ಕುಮಾರ್‌ ಅವರ ಪಾಕಿಸ್ತಾನದ ಅಭಿಮಾನಿ” ಎಂಬ ಶೀರ್ಷಿಕೆ ನೀಡಿ ಅಪ್ಲೋಡ್ ಮಾಡಿತ್ತು.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ).

ಪುನೀತ್‌ ರಾಜ್‌ಕುಮಾರ್‌ ಅವರ ನಿಧನಕ್ಕೆ ಪಾಕಿಸ್ತಾನದ ಯುವ ಅಭಿಮಾನಿ ಗಾನ ನಮನ ಸಲ್ಲಿಸಿದ್ದಾರೆ ಎಂದು ಹಲವು ಕನ್ನಡದ ಚಾನೆಲ್‌ಗಳು, ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

OnePlus News Kannada’ ಎಂಬ ಚಾನೆಲ್‌, ‘ಅಪ್ಪುಗಾಗಿ ಪಾಕಿಸ್ತಾನಿ ಅಭಿಮಾನಿ ಹಾಡಿದ!’ ಎಂದು ಶೀರ್ಷಿಕೆ ನೀಡಿ ವಿಡಯೊ ವರದಿ ಮಾಡಿದೆ. ಸುಮಾರು ಏಳು ಲಕ್ಷ ಚಂದಾದಾರರನ್ನು ಹೊಂದಿರುವ Karnataka TV ಎಂಬ ಯೂಟ್ಯೂಬ್ ಚಾನೆಲ್‌, ‘ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ’ ಎಂಬ ಶೀರ್ಷಿಕೆ ನೀಡಿ ವರದಿ ಮಾಡಿದೆ. ಇಷ್ಟೇ ಅಲ್ಲದೆ ಹಲವಾರು ಜನರು ಬೇರೆ ಬೇರೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಇದೇ ರೀತಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಯುವಕ ಪುನೀತ್‌ ಅವರಿಗೆ ‘ಶ್ರದ್ದಾಂಜಲಿ ಕೋರಿ’ ಬೊಂಬೆ ಹೇಳುತೈತೆ ಹಾಡಿದರೇ?

ವಿಡಿಯೊದಲ್ಲಿ ಇರುವ ಯುವಕನ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್‌ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದೆ. ಈ ವೇಳೆ ನಮಗೆ ಅಜ್ಮಲ್ ಮುಘಲ್ ಎಂಬ ಯೂಟ್ಯಬ್‌ ಚಾನೆಲ್‌ ಸಿಕ್ಕಿದೆ. ಅಜ್ಮಲ್ ಮುಘಲ್ ಅವರ ಬಗ್ಗೆ ನಾವು ಮತ್ತಷ್ಟು ಹುಡುಕಿದ್ದು ಅವರ ಇನ್‌ಸ್ಟಾಗ್ರಾಂ ಪ್ರೋಫೈಲ್ ಸಿಕ್ಕಿದೆ. ಅದರಲ್ಲಿ ಅವರು ತಾನೊಬ್ಬ ಸಂಗೀತಗಾರ ಎಂದು ಹೇಳಿಕೊಂಡಿದ್ದಾರೆ.

ಅಜ್ಮಲ್ ಮುಘಲ್ ತನ್ನ ಯೂಟ್ಯೂಬ್ ಚಾನೆಲ್‌ ಅನ್ನು 2012 ರ ಜೂನ್ 11 ರಂದು ಪ್ರಾರಂಭಿಸಿದ್ದರು. ಅಜ್ಮಲ್ ತನ್ನ ಚಾನೆಲ್‌ನಲ್ಲಿ ಒಟ್ಟು 18 ವಿಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ತನ್ನ ಚಾನೆಲ್‌ನಲ್ಲಿ ಅವರು ಅಪ್ಲೋಡ್‌ ಮಾಡಿದ್ದ ಹಾಡು ಪುನೀತ್ ಅಭಿನಯದ ‘ಮಿಲನ’ ಚಿತ್ರದ ನಿನ್ನಿಂದಲೇ ಹಾಡನ್ನು ಹಾಡಿದ್ದಾರೆ. ಅಜ್ಮಲ್ ತನ್ನ ಚಾನೆಲ್‌ನಲ್ಲಿ ‘ಮುಂಗಾರು ಮಳೆ’, ‘ಮುಗುಳುನಗೆ’, ‘ಗೆಳೆಯ’, ‘ಗಾಳಿಪಟ’ ಚಿತ್ರಗಳ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ: Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ಅದರಂತೆ ಬೊಂಬೆ ಹೇಳುತೈತೆ ಹಾಡನ್ನು ಮೂರು ವರ್ಷಗಳ ಹಿಂದೆ 2018 ರ ಜನವರಿ 12 ರಂದು ತನ್ನ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದರು.

ಅಜ್ಮಲ್ ಮುಘಲ್ ಈ ಈ ಹಾಡಿನ ವಿವರಣೆಯಲ್ಲಿ, “ನಾನೊಬ್ಬ ಪಾಕಿಸ್ತಾನಿಯಾಗಿದ್ದು, ಕನ್ನಡವು ಕಠಿಣ ಮತ್ತು ಮಧುರವಾದ ಭಾಷೆಯಾಗಿದೆ. ಅದನ್ನು ನಾನು ಚೆನ್ನಾಗಿ ಹಾಡಲು ಇಷ್ಟಪಡುತ್ತೇನೆ. ಮತ್ತೊಂದು ವಿಷಯವೇನೆಂದರೆ, ನನಗೆ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ನಾನಿದನ್ನು ಆನಂದಿಸುತ್ತೇನೆ’’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಅಜ್ಮಲ್‌ ಇದೇ ಹಾಡನ್ನು 2017 ಮೇ 14 ರಂದು ಸಹ ಹಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದರು.

ಈ ಹಾಡನ್ನೇ ಕನ್ನಡದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಮಾಧ್ಯಮಗಳು ತೆಗೆದುಕೊಂಡು, ‘ಪಾಕಿಸ್ತಾನಿ ಯುವಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ’ ಎಂದು ತಪ್ಪಾಗಿ ವರದಿ ಮಾಡಿವೆ.

ಒಟ್ಟಿನಲ್ಲಿ ಹೇಳುವುದೇನೆಂದರೆ, ಯುವಕ ಪಾಕಿಸ್ತಾನಿ ಎಂಬುವುದು ನಿಜವೇ ಆಗಿದೆ. ಪಾಕಿಸ್ತಾನದ ಲಾಹೋರ್‌ನ ಐತಿಹಾಸಿಕ ಸ್ಥಳವಾದ ‘ಮಿನಾರ್‌-ಇ-ಪಾಕಿಸ್ತಾನ’ ಸ್ಥಂಭದ ಮುಂದೆಯೆ ವಿಡಿಯೊ ಮಾಡಿದ್ದಾರೆ. ಆದರೆ ಕನ್ನಡ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಅವರು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮೂರು ವರ್ಷಗಳ ಹಿಂದೆಯೆ ಅಪ್‌ಲೋಡ್ ಮಾಡಿದ್ದರು.

ನಾನುಗೌರಿ.ಕಾಂ ಪಾಕಿಸ್ತಾನಿ ಯುವಕ ಅಜ್ಮಲ್ ಅವರನ್ನು ವಿಡಿಯೋ ಕಾಲ್ ಮತ್ತು ಫೋನ್ ಕರೆ ಮೂಲಕ ಸಂಪರ್ಕಿಸಿತು. ಆದರೆ ನೆಟ್‌ವರ್ಕ್‌ ಕಾರಣಗಳಿಗಾಗಿ ಸಂವಹನ ಸಾಧ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣ ಅವರ ಪ್ರತಿಕ್ರಿಯೆಯನ್ನೂ ಇಲ್ಲಿ ಅಪ್ಡೇಟ್ ಮಾಡುತ್ತೇವೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...