Homeಕರ್ನಾಟಕಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಟಿವಿ9 ಸೇರಿದಂತೆ ಹಲವು ಕನ್ನಡದ ಮಾಧ್ಯಮಗಳು ಇದನ್ನು ‘ತಪ್ಪಾಗಿ’ ವರದಿ ಮಾಡಿವೆ

- Advertisement -
- Advertisement -

ಕನ್ನಡದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌ ಶುಕ್ರವಾರ ಹೃದಯಾಘಾತಕ್ಕೊಳಗಾಗಿ ನಿಧನ ಹೊಂದಿದ್ದಾರೆ. ಪ್ರತಿಭಾವಂತ ನಟನ ಅಕಾಲಿಕ ನಿಧನಕ್ಕೆ ದೇಶದಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ನಟನ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಇಡಲಾಗಿದ್ದು, ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಪಾಕಿಸ್ತಾನಿ ಯುವಕನೊಬ್ಬ ಹಾಡಿರುವ “ಬೊಂಬೆ ಹೇಳುತೈತೆ, ಮತ್ತೆ ಹೇಳುತೈತೆ” ಕನ್ನಡ ಹಾಡೊಂಡು ವೈರಲ್‌ ಆಗಿದ್ದು, ಕನ್ನಡದ ಪ್ರಮುಖ ಮಾಧ್ಯಮವಾದ ಟಿವಿ9 “ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ” ಎಂದು ಸುದ್ದಿ ಮಾಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ). ಅಲ್ಲದೆ ತನ್ನ ಯೂಟ್ಯೂಬ್ ಚಾನೆಲ್‌ನಲ್ಲೂ ಅದೇ ಸುದ್ದಿಯ ವಿಡಿಯೊ ವರದಿ ಮಾಡಿದ್ದು, “ಅಪ್ಪು ನಿಧನಕ್ಕೆ ಪಾಕಿಸ್ತಾನ ಅಭಿಮಾನಿಯ ಸಂತಾಪ” ಎಂದು ಶೀರ್ಷಿಕೆ ನೀಡಿದೆ.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ: ಪುನೀತ್‌ ಫಿಟ್‌ನೆಟ್‌‌: ಡಾ.ದೇವಿ ಶೆಟ್ಟಿ ಹೆಸರಲ್ಲಿ ಫೇಕ್‌ ನ್ಯೂಸ್‌ ಹರಿದಾಟ

ಟಿವಿ9 ಈ ವಿಡಿಯೊವನ್ನು ನಮ್ ರೇಡಿಯೊ’ ಎಂಬ ಯೂಟ್ಯೂಬ್ ಚಾನೆಲ್‌ನಿಂದ ಪಡೆದಿದ್ದು, ನಮ್‌ ರೇಡಿಯೊ ಇದನ್ನು ಪುನೀತ್‌ ರಾಜ್‌ಕುಮಾರ್‌ ನಿಧನ ಹೊಂದಿದ ಆಕ್ಟೋಬರ್‌ 29 ರಂದು ತನ್ನ ಚಾನೆಲ್‌ಗೆ, “ಪುನೀತ್‌ ರಾಜ್‌ಕುಮಾರ್‌ ಅವರ ಪಾಕಿಸ್ತಾನದ ಅಭಿಮಾನಿ” ಎಂಬ ಶೀರ್ಷಿಕೆ ನೀಡಿ ಅಪ್ಲೋಡ್ ಮಾಡಿತ್ತು.(ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ).

ಪುನೀತ್‌ ರಾಜ್‌ಕುಮಾರ್‌ ಅವರ ನಿಧನಕ್ಕೆ ಪಾಕಿಸ್ತಾನದ ಯುವ ಅಭಿಮಾನಿ ಗಾನ ನಮನ ಸಲ್ಲಿಸಿದ್ದಾರೆ ಎಂದು ಹಲವು ಕನ್ನಡದ ಚಾನೆಲ್‌ಗಳು, ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

OnePlus News Kannada’ ಎಂಬ ಚಾನೆಲ್‌, ‘ಅಪ್ಪುಗಾಗಿ ಪಾಕಿಸ್ತಾನಿ ಅಭಿಮಾನಿ ಹಾಡಿದ!’ ಎಂದು ಶೀರ್ಷಿಕೆ ನೀಡಿ ವಿಡಯೊ ವರದಿ ಮಾಡಿದೆ. ಸುಮಾರು ಏಳು ಲಕ್ಷ ಚಂದಾದಾರರನ್ನು ಹೊಂದಿರುವ Karnataka TV ಎಂಬ ಯೂಟ್ಯೂಬ್ ಚಾನೆಲ್‌, ‘ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ’ ಎಂಬ ಶೀರ್ಷಿಕೆ ನೀಡಿ ವರದಿ ಮಾಡಿದೆ. ಇಷ್ಟೇ ಅಲ್ಲದೆ ಹಲವಾರು ಜನರು ಬೇರೆ ಬೇರೆ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಇದೇ ರೀತಿಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಯುವಕ ಪುನೀತ್‌ ಅವರಿಗೆ ‘ಶ್ರದ್ದಾಂಜಲಿ ಕೋರಿ’ ಬೊಂಬೆ ಹೇಳುತೈತೆ ಹಾಡಿದರೇ?

ವಿಡಿಯೊದಲ್ಲಿ ಇರುವ ಯುವಕನ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್‌ ಮೂಲಕ ಇಂಟರ್‌ನೆಟ್‌ನಲ್ಲಿ ಹುಡುಕಾಡಿದೆ. ಈ ವೇಳೆ ನಮಗೆ ಅಜ್ಮಲ್ ಮುಘಲ್ ಎಂಬ ಯೂಟ್ಯಬ್‌ ಚಾನೆಲ್‌ ಸಿಕ್ಕಿದೆ. ಅಜ್ಮಲ್ ಮುಘಲ್ ಅವರ ಬಗ್ಗೆ ನಾವು ಮತ್ತಷ್ಟು ಹುಡುಕಿದ್ದು ಅವರ ಇನ್‌ಸ್ಟಾಗ್ರಾಂ ಪ್ರೋಫೈಲ್ ಸಿಕ್ಕಿದೆ. ಅದರಲ್ಲಿ ಅವರು ತಾನೊಬ್ಬ ಸಂಗೀತಗಾರ ಎಂದು ಹೇಳಿಕೊಂಡಿದ್ದಾರೆ.

ಅಜ್ಮಲ್ ಮುಘಲ್ ತನ್ನ ಯೂಟ್ಯೂಬ್ ಚಾನೆಲ್‌ ಅನ್ನು 2012 ರ ಜೂನ್ 11 ರಂದು ಪ್ರಾರಂಭಿಸಿದ್ದರು. ಅಜ್ಮಲ್ ತನ್ನ ಚಾನೆಲ್‌ನಲ್ಲಿ ಒಟ್ಟು 18 ವಿಡಿಯೊಗಳನ್ನು ಅಪ್ಲೋಡ್ ಮಾಡಿದ್ದಾರೆ. ತನ್ನ ಚಾನೆಲ್‌ನಲ್ಲಿ ಅವರು ಅಪ್ಲೋಡ್‌ ಮಾಡಿದ್ದ ಹಾಡು ಪುನೀತ್ ಅಭಿನಯದ ‘ಮಿಲನ’ ಚಿತ್ರದ ನಿನ್ನಿಂದಲೇ ಹಾಡನ್ನು ಹಾಡಿದ್ದಾರೆ. ಅಜ್ಮಲ್ ತನ್ನ ಚಾನೆಲ್‌ನಲ್ಲಿ ‘ಮುಂಗಾರು ಮಳೆ’, ‘ಮುಗುಳುನಗೆ’, ‘ಗೆಳೆಯ’, ‘ಗಾಳಿಪಟ’ ಚಿತ್ರಗಳ ಹಾಡನ್ನು ಹಾಡಿದ್ದಾರೆ.

ಇದನ್ನೂ ಓದಿ: Puneeth Rajkumar | ಭಾನುವಾರ ಪುನೀತ್‌ ರಾಜ್‌ಕುಮಾರ್‌ ಅಂತ್ಯಕ್ರಿಯೆ: ಸಿಎಂ ಸ್ಪಷ್ಟನೆ

ಅದರಂತೆ ಬೊಂಬೆ ಹೇಳುತೈತೆ ಹಾಡನ್ನು ಮೂರು ವರ್ಷಗಳ ಹಿಂದೆ 2018 ರ ಜನವರಿ 12 ರಂದು ತನ್ನ ಯೂಟ್ಯೂಬ್‌ ಚಾನೆಲ್‌ಗೆ ಅಪ್‌ಲೋಡ್ ಮಾಡಿದ್ದರು.

ಅಜ್ಮಲ್ ಮುಘಲ್ ಈ ಈ ಹಾಡಿನ ವಿವರಣೆಯಲ್ಲಿ, “ನಾನೊಬ್ಬ ಪಾಕಿಸ್ತಾನಿಯಾಗಿದ್ದು, ಕನ್ನಡವು ಕಠಿಣ ಮತ್ತು ಮಧುರವಾದ ಭಾಷೆಯಾಗಿದೆ. ಅದನ್ನು ನಾನು ಚೆನ್ನಾಗಿ ಹಾಡಲು ಇಷ್ಟಪಡುತ್ತೇನೆ. ಮತ್ತೊಂದು ವಿಷಯವೇನೆಂದರೆ, ನನಗೆ ಹಾಡಿನ ಅರ್ಥ ಗೊತ್ತಿಲ್ಲದಿದ್ದರೂ ನಾನಿದನ್ನು ಆನಂದಿಸುತ್ತೇನೆ’’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ಅಜ್ಮಲ್‌ ಇದೇ ಹಾಡನ್ನು 2017 ಮೇ 14 ರಂದು ಸಹ ಹಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿದ್ದರು.

ಈ ಹಾಡನ್ನೇ ಕನ್ನಡದ ಯೂಟ್ಯೂಬ್ ಚಾನೆಲ್‌ಗಳು ಮತ್ತು ಮಾಧ್ಯಮಗಳು ತೆಗೆದುಕೊಂಡು, ‘ಪಾಕಿಸ್ತಾನಿ ಯುವಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ’ ಎಂದು ತಪ್ಪಾಗಿ ವರದಿ ಮಾಡಿವೆ.

ಒಟ್ಟಿನಲ್ಲಿ ಹೇಳುವುದೇನೆಂದರೆ, ಯುವಕ ಪಾಕಿಸ್ತಾನಿ ಎಂಬುವುದು ನಿಜವೇ ಆಗಿದೆ. ಪಾಕಿಸ್ತಾನದ ಲಾಹೋರ್‌ನ ಐತಿಹಾಸಿಕ ಸ್ಥಳವಾದ ‘ಮಿನಾರ್‌-ಇ-ಪಾಕಿಸ್ತಾನ’ ಸ್ಥಂಭದ ಮುಂದೆಯೆ ವಿಡಿಯೊ ಮಾಡಿದ್ದಾರೆ. ಆದರೆ ಕನ್ನಡ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊವನ್ನು ಅವರು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಮೂರು ವರ್ಷಗಳ ಹಿಂದೆಯೆ ಅಪ್‌ಲೋಡ್ ಮಾಡಿದ್ದರು.

ನಾನುಗೌರಿ.ಕಾಂ ಪಾಕಿಸ್ತಾನಿ ಯುವಕ ಅಜ್ಮಲ್ ಅವರನ್ನು ವಿಡಿಯೋ ಕಾಲ್ ಮತ್ತು ಫೋನ್ ಕರೆ ಮೂಲಕ ಸಂಪರ್ಕಿಸಿತು. ಆದರೆ ನೆಟ್‌ವರ್ಕ್‌ ಕಾರಣಗಳಿಗಾಗಿ ಸಂವಹನ ಸಾಧ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ತಕ್ಷಣ ಅವರ ಪ್ರತಿಕ್ರಿಯೆಯನ್ನೂ ಇಲ್ಲಿ ಅಪ್ಡೇಟ್ ಮಾಡುತ್ತೇವೆ.

ಇದನ್ನೂ ಓದಿ: ಚಿತ್ರರಂಗದ ’ಯುವರತ್ನ’ ಪುನೀತ್ ರಾಜ್‌ಕುಮಾರ್‌ ಅವರ ಅಪರೂಪದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...