Homeದಿಟನಾಗರಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು ನಿಜವೆ?

ಫ್ಯಾಕ್ಟ್‌ಚೆಕ್‌: ಕೇಂದ್ರ ಸರ್ಕಾರ ಪ್ರತಿ ಹೆಣ್ಣು ಮಕ್ಕಳಿಗೆ ಮಾಸಿಕ ತಲಾ 2000 ರೂ. ನೀಡುತ್ತಿರುವುದು ನಿಜವೆ?

- Advertisement -
- Advertisement -

ಕೇಂದ್ರ ಸರ್ಕಾರ ‘ಪ್ರಧಾನಮಂತ್ರಿ ಕನ್ಯಾ ಆಶಿರ್ವಾದ ಯೋಜನೆ’ ಎಂಬ ಹೆಸರಿನ ಯೋಜನೆಯೊಂದನ್ನು ಪ್ರಾರಂಭಿಸಿದ್ದು, ಇದರಲ್ಲಿ ದೇಶದ ಪ್ರತಿ ಹೆಣ್ಣು ಮಕ್ಕಳಿಗೂ ತಿಂಗಳಿಗೆ 2000 ರೂ ಸಹಾಯಧನ ನೀಡುತ್ತಿದೆ ಎಂಬ ಸಂದೇಶವಿರುವ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದರ ಆರ್ಕೈವ್ ಲಿಂಕ್ ಇಲ್ಲಿದೆ.

ಪ್ರತಿಪಾದನೆ: ‘ಪ್ರಧಾನಮಂತ್ರಿ ಕನ್ಯಾ ಆಶಿರ್ವಾದ ಯೋಜನೆ’ ಅಡಿಯಲ್ಲಿ ಭಾರತ ಸರ್ಕಾರವು ದೇಶದ ಪ್ರತಿ ಬಾಲಕಿಗೆ 2000 ರೂ. ವಿತರಿಸುತ್ತಿದೆ.

ಸತ್ಯ: ಭಾರತ ಸರ್ಕಾರದ ಯೋಜನೆಗಳಲ್ಲಿ ‘ಪ್ರಧಾನಮಂತ್ರಿ ಕನ್ಯಾ ಆಶಿರ್ವಾದ ಯೋಜನೆ’ ಎಂಬ ಹೆಸರಿನಲ್ಲಿ ಯಾವುದೇ ಯೋಜನೆ ಇಲ್ಲ. ಇಂತಹ ಯೋಜನೆಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ(ಪಿಐಬಿ) ಕೂಡ ಇಂತಹ ಯಾವುದೇ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಆದ್ದರಿಂದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂಓದಿ: ಕಂಗನಾಗೆ ಬೆಂಬಲ ನೀಡಲು ಮುಂಬೈಗೆ ಆಗಮಿಸಿತೆ ಕರ್ಣಿಸೇನಾ!: ಸತ್ಯಾಸತ್ಯತೆ ಏನು..?

ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿರುವ ಎಲ್ಲಾ ಯೋಜನೆಗಳ ವಿವರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ. ಆದರೆ, ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಯಾವುದೇ ವಿಭಾಗದಲ್ಲಿಯೂ ಪ್ರಸ್ತುತ ವೈರಲಾಗುತ್ತಿರುವ ‘ಪಿಎಂ ಕನ್ಯಾ ಆಶಿರ್ವಾದ ಯೋಜನೆ’ ಹೆಸರಿನ ಯೋಜನೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ.

ಈ ಯೋಜನೆಯ ಕುರಿತಾದ ಪೋಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಾಗ, ಈ ಎಲ್ಲಾ ಪೋಸ್ಟ್‌ಗಳು ನಕಲಿ ಮತ್ತು ಭಾರತ ಸರ್ಕಾರವು ಅಂತಹ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಸ್ಪಷ್ಟಪಡಿಸಿದೆ.

 

ಒಟ್ಟಿನಲ್ಲಿ ಹೇಳುವುದಾದರೆ, ದೇಶದ ಪ್ರತಿ ಹೆಣ್ಣು ಮಗುವಿಗೆ 2,000 ರೂ. ಸಿಗುತ್ತದೆ ಎಂದು ಹೇಳಲಾಗಿರುವ ‘ಪಿಎಂ ಕನ್ಯಾ ಆಶಿರ್ವಾದ ಯೋಜನೆ’ ಯೂ ನಕಲಿಯಾಗಿದ್ದು ಇಂತಹ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...