Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುಪಿಯ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

ಫ್ಯಾಕ್ಟ್‌‌ಚೆಕ್‌: ಯುಪಿಯ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

- Advertisement -
- Advertisement -

ಮುಸಲ್ಮಾನರೊಂದಿಗೆ ವಾಗ್ವದ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸುಲ್ತಾನಪುರದ ಅರ್ಚಕನನ್ನು ಕೊಲ್ಲಲಾಗಿದೆ ಎಂಬ ಸಂದೇಶದೊಂದಿಗೆ ಮರಕ್ಕೆ ನೇಣು ಹಾಕಿದ್ದ ವ್ಯಕ್ತಿಯ ಮೃತ ದೇಹದ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಸುಲ್ತಾನಪುರ ಜಿಲ್ಲೆಯ ಚಂದಾದ ಎಸ್‌ಎಚ್‌ಒ “ಇದು ಆತ್ಮಹತ್ಯೆ ಪ್ರಕರಣವಾಗಿದ್ದು, ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ. ಮರಣೋತ್ತರ ವರದಿ ಕೂಡಾ ನೇಣು ಹಾಕಿ ಸಾವು ಉಂಟಾಗಿದೆ ಎನ್ನುತ್ತದೆ” ಎಂದು ತಿಳಿಸಿದ್ದಾರೆ.

ಚಿತ್ರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಚಿತ್ರದೊಂದಿಗೆ “ಸಾವನ್ ಪೂಜೆಗಾಗಿ ಮುಸ್ಲಿಮರೊಂದಿಗೆ ವಾಗ್ವಾದ ನಡೆಸಿದ ನಂತರ ಅವರ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’’ ಎಂಬ ಉಲ್ಲೇಖ ಮಾಡಲಾಗಿದೆ. ಇದನ್ನು ಹಲವಾರು ಜನರು ಹಾಗೆಯೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಇನ್ನು ಹಲವಾರು ಟ್ವಿಟ್ಟರ್ ಹಾಗೂ ಫೇಸ್‌‌ಬುಕ್ ಬಳಕೆದಾರರು ಅರ್ಚಕನನ್ನು ಕೊಲ್ಲಲಾಗಿದೆ ಎಂದು ಶಿರ್ಷಿಕೆ ನೀಡಿ ಚಿತ್ರವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


ಫ್ಯಾಕ್ಟ್‌ಚೆಕ್

ಸುಲ್ತಾನಪುರದ ಚಂದಾದ ಛಟೌನಾದಲ್ಲಿ ಈ ಘಟನೆ ನಡೆದಿದೆ ಎಂದು ಸುಲ್ತಾನಪುರ ಪೊಲೀಸರು ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಅರ್ಚಕ ಸತ್ಯೇಂದ್ರ ನಂದ ಸರಸ್ವತಿ ಜಿ ಮಹಾರಾಜ್ ಅವರ ದೇಹವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಜುಲೈ 23 ರಂದು ನವಭಾರತ್ ಟೈಮ್ಸ್ ನಲ್ಲಿ ಪ್ರಕಟವಾದ ಲೇಖನದಲ್ಲಿ ಇದು ಆತ್ಮಹತ್ಯೆಯ ಪ್ರಕರಣವೋ ಅಥವಾ ಅರ್ಚಕ ಕೊಲೆಯಾಗಿದ್ದಾರೋ ಎಂದು ಸ್ಥಳೀಯರು ಚರ್ಚಿಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಘಟನೆಯ ಬಗ್ಗೆ ಮಾತನಾಡಿದ ಚಂದಾದ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಈ ಘಟನೆಗೆ ಯಾವುದೇ ಕೋಮು ಆಯಾಮವನ್ನು ನಿರಾಕರಿಸಿದ್ದಾರೆ ಮತ್ತು ಮರಣೋತ್ತರ ವರದಿಯು ಇದು ನೇಣು ಹಾಕುವ ಮೂಲಕ ಸಾವಾಗಿದೆ ಎಂದಿದೆ.

“ಇವು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ನಕಲಿ ನಿರೂಪಣೆಗಳು. ಇದು ಆತ್ಮಹತ್ಯೆಯ ಪ್ರಕರಣ. ಮರಣೋತ್ತರ ವರದಿಯಲ್ಲಿ ಅದು ನೇಣು ಬಿಗಿದು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತದೆ. ಅವರ ಕುಟುಂಬ ಸದಸ್ಯರು ಕೂಡ ಬಂದಿದ್ದು, ಅವರು ತನಿಖೆಗೆ ಸಹಕರಿಸಿದ್ದಾರೆ. ಕುಟುಂಬ ಸದಸ್ಯರು ಕೂಡ ಈ ವಿಷಯದಲ್ಲಿ ಯಾರ ಮೇಲೂ ಆರೋಪ ಮಾಡಿಲ್ಲ. ವೈಯಕ್ತಿಕ ದ್ವೇಷದ ಕೋನವೂ ಇರಲಿಲ್ಲ,” ಎಂದು ಅವರು ಹೇಳಿದ್ದಾರೆ.

ಈ ವಿಷಯವು ಎರಡು ಸಮುದಾಯಗಳ ನಡುವೆ ನಡೆದದಲ್ಲ ಇದು ಆತ್ಮಹತ್ಯೆಯ ಪ್ರಕರಣವಾಗಿದೆ ಎಂದು ಸ್ಥಳೀಯ ವರದಿಗಳು ದೃಡಪಡಿಸಿದ್ದಾರೆ ಎಂದು ದಿ ಕ್ವಿಂಟ್ ಹೇಳಿದೆ.


ಓದಿ:

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...