Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಯುಪಿಯ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

ಫ್ಯಾಕ್ಟ್‌‌ಚೆಕ್‌: ಯುಪಿಯ ಅರ್ಚಕನನ್ನು ಮುಸ್ಲಿಮರು ಕೊಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ

- Advertisement -
- Advertisement -

ಮುಸಲ್ಮಾನರೊಂದಿಗೆ ವಾಗ್ವದ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸುಲ್ತಾನಪುರದ ಅರ್ಚಕನನ್ನು ಕೊಲ್ಲಲಾಗಿದೆ ಎಂಬ ಸಂದೇಶದೊಂದಿಗೆ ಮರಕ್ಕೆ ನೇಣು ಹಾಕಿದ್ದ ವ್ಯಕ್ತಿಯ ಮೃತ ದೇಹದ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಸುಲ್ತಾನಪುರ ಜಿಲ್ಲೆಯ ಚಂದಾದ ಎಸ್‌ಎಚ್‌ಒ “ಇದು ಆತ್ಮಹತ್ಯೆ ಪ್ರಕರಣವಾಗಿದ್ದು, ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ. ಮರಣೋತ್ತರ ವರದಿ ಕೂಡಾ ನೇಣು ಹಾಕಿ ಸಾವು ಉಂಟಾಗಿದೆ ಎನ್ನುತ್ತದೆ” ಎಂದು ತಿಳಿಸಿದ್ದಾರೆ.

ಚಿತ್ರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಚಿತ್ರದೊಂದಿಗೆ “ಸಾವನ್ ಪೂಜೆಗಾಗಿ ಮುಸ್ಲಿಮರೊಂದಿಗೆ ವಾಗ್ವಾದ ನಡೆಸಿದ ನಂತರ ಅವರ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ’’ ಎಂಬ ಉಲ್ಲೇಖ ಮಾಡಲಾಗಿದೆ. ಇದನ್ನು ಹಲವಾರು ಜನರು ಹಾಗೆಯೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ.

ಇನ್ನು ಹಲವಾರು ಟ್ವಿಟ್ಟರ್ ಹಾಗೂ ಫೇಸ್‌‌ಬುಕ್ ಬಳಕೆದಾರರು ಅರ್ಚಕನನ್ನು ಕೊಲ್ಲಲಾಗಿದೆ ಎಂದು ಶಿರ್ಷಿಕೆ ನೀಡಿ ಚಿತ್ರವನ್ನು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು


ಫ್ಯಾಕ್ಟ್‌ಚೆಕ್

ಸುಲ್ತಾನಪುರದ ಚಂದಾದ ಛಟೌನಾದಲ್ಲಿ ಈ ಘಟನೆ ನಡೆದಿದೆ ಎಂದು ಸುಲ್ತಾನಪುರ ಪೊಲೀಸರು ಈ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇದರಲ್ಲಿ ಅರ್ಚಕ ಸತ್ಯೇಂದ್ರ ನಂದ ಸರಸ್ವತಿ ಜಿ ಮಹಾರಾಜ್ ಅವರ ದೇಹವು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಜುಲೈ 23 ರಂದು ನವಭಾರತ್ ಟೈಮ್ಸ್ ನಲ್ಲಿ ಪ್ರಕಟವಾದ ಲೇಖನದಲ್ಲಿ ಇದು ಆತ್ಮಹತ್ಯೆಯ ಪ್ರಕರಣವೋ ಅಥವಾ ಅರ್ಚಕ ಕೊಲೆಯಾಗಿದ್ದಾರೋ ಎಂದು ಸ್ಥಳೀಯರು ಚರ್ಚಿಸುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಘಟನೆಯ ಬಗ್ಗೆ ಮಾತನಾಡಿದ ಚಂದಾದ ಪೊಲೀಸ್ ಠಾಣೆಯ ಎಸ್‌ಎಚ್‌ಒ, ಈ ಘಟನೆಗೆ ಯಾವುದೇ ಕೋಮು ಆಯಾಮವನ್ನು ನಿರಾಕರಿಸಿದ್ದಾರೆ ಮತ್ತು ಮರಣೋತ್ತರ ವರದಿಯು ಇದು ನೇಣು ಹಾಕುವ ಮೂಲಕ ಸಾವಾಗಿದೆ ಎಂದಿದೆ.

“ಇವು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ನಕಲಿ ನಿರೂಪಣೆಗಳು. ಇದು ಆತ್ಮಹತ್ಯೆಯ ಪ್ರಕರಣ. ಮರಣೋತ್ತರ ವರದಿಯಲ್ಲಿ ಅದು ನೇಣು ಬಿಗಿದು ಸಾವನ್ನಪ್ಪಿದ್ದಾರೆ ಎಂದು ಹೇಳುತ್ತದೆ. ಅವರ ಕುಟುಂಬ ಸದಸ್ಯರು ಕೂಡ ಬಂದಿದ್ದು, ಅವರು ತನಿಖೆಗೆ ಸಹಕರಿಸಿದ್ದಾರೆ. ಕುಟುಂಬ ಸದಸ್ಯರು ಕೂಡ ಈ ವಿಷಯದಲ್ಲಿ ಯಾರ ಮೇಲೂ ಆರೋಪ ಮಾಡಿಲ್ಲ. ವೈಯಕ್ತಿಕ ದ್ವೇಷದ ಕೋನವೂ ಇರಲಿಲ್ಲ,” ಎಂದು ಅವರು ಹೇಳಿದ್ದಾರೆ.

ಈ ವಿಷಯವು ಎರಡು ಸಮುದಾಯಗಳ ನಡುವೆ ನಡೆದದಲ್ಲ ಇದು ಆತ್ಮಹತ್ಯೆಯ ಪ್ರಕರಣವಾಗಿದೆ ಎಂದು ಸ್ಥಳೀಯ ವರದಿಗಳು ದೃಡಪಡಿಸಿದ್ದಾರೆ ಎಂದು ದಿ ಕ್ವಿಂಟ್ ಹೇಳಿದೆ.


ಓದಿ:

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...