Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...