Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...