Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...