Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

ಫ್ಯಾಕ್ಟ್‌‌ಚೆಕ್‌: ಈ ಚಿತ್ರವನ್ನು ಮಹಿಳೆಯರ ಕಾಲಿಗೆ ಸಂಕೋಲೆ ಕಟ್ಟಿರುವಂತೆ ಎಡಿಟ್ ಮಾಡಲಾಗಿದೆ!

- Advertisement -
- Advertisement -

ಅಫ್ಘಾನ್‌ ದೇಶವನ್ನು ಇಪ್ಪತ್ತು ವರ್ಷಗಳ ನಂತರ ತಾಲಿಬಾನ್‌ ಮರು ವಶಪಡಿಸಿಕೊಂಡ ನಂತರ ಹಲವು ಬರ್ಬರ ಮತ್ತು ಮಾನವೀಯ ಬಿಕ್ಕಟ್ಟಿನ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದರಲ್ಲೊಂದಾಗಿದೆ, ‘ಬುರ್ಖಾ ಧರಿಸಿರುವ ಮೂವರು ಮಹಿಳೆಯರ ಕಾಲಿಗೆ ಸರಪಣಿಯಿಂದ ಕಟ್ಟಿ ವ್ಯಕ್ತಿಯೊಬ್ಬ ಎಳೆದೊಯ್ಯುತ್ತಿರುವ’ ಚಿತ್ರ. ಈ ಚಿತ್ರದೊಂದಿಗೆ ಪಾಶ್ಚಿಮಾತ್ಯ ಉಡುಪಿನಲ್ಲಿರುವ ಮಹಿಳೆಯರ ಇನ್ನೊಂದು ಫೋಟೋವನ್ನು ಚಿತ್ರವನ್ನು ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಈ ಎರಡು ಚಿತ್ರವನ್ನು ಹಂಚಿ, ತಾಲಿಬಾನ್‌ ಆಕ್ರಮಿತ ಅಫ್ಘಾನ್‌ ಮತ್ತು 1960-70 ರ ದಶಕದಲ್ಲಿನ ಅಫ್ಘಾನಿನ ವ್ಯತ್ಯಾಸವನ್ನು ತೋರಿಸಲು ಪ್ರಯತ್ನಿಸಲಾಗುತ್ತಿದೆ. ಟಿವಿ 9 ಭಾರತವರ್ಶ್ ನಿರೂಪಕ ಶುಭಂಕರ್ ಮಿಶ್ರಾ ಕೂಡಾ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಟ್ವೀಟ್‌ ಅನ್ನು ಕೆಳಗೆ ನೀಡಲಾಗಿದೆ. (ಆರ್ಕೈವ್ ಲಿಂಕ್)

ಮೇಲಿನ ಟ್ವೀಟ್‌ಗಳನ್ನು ಹಾಕಿದ ಕೆಲವೆ ಗಂಟೆಗಳ ನಂತರ, ಶುಭಂಕರ್ ಮಿಶ್ರಾ ಮತ್ತೊಮ್ಮೆ ಚಿತ್ರಗಳನ್ನು ಬೇರೆ ಗ್ರಾಫಿಕ್‌ನಲ್ಲಿ ಟ್ವೀಟ್ ಮಾಡಿದ್ದಾರೆ. (ಆರ್ಕೈವ್ ಲಿಂಕ್)

ಈ ಚಿತ್ರವು ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಈ ಚಿತ್ರಗಳು ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್‌ ಆಗಿದೆ. (1 ಮತ್ತು 2)

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ಚಿತ್ರಗಳನ್ನು ಖ್ಯಾತ ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಗಿರುವ ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ನಡೆಸಿದೆ. ವೈರಲ್‌ ಚಿತ್ರವನ್ನು ಸೂಕ್ಷ್ಮವಾಗಿ ನೋಡಿದರೆ, ಸಂಕೋಲೆಗಳ ನೆರಳು ಸ್ವಲ್ಪ ವಿಚಿತ್ರವಾಗಿರುವುದನ್ನು ಗಮನಿಸಬಹುದಾಗಿದೆ. ಪುರುಷ ಮತ್ತು ಅವರ ಹಿಂದೆ ಇರುವ ಮಹಿಳೆಯ ನಡುವೆ ಸಂಕೋಲೆಯ ನೆರಳು ಗೋಚರಿಸುತ್ತದೆ, ಆದರೆ ನಂತರದ ಮಹಿಳೆಯ ನಡುವೆ ಈ ನೆರಳು ಕಾಣೆಯಾಗಿದೆ. ಆದರೆ ಎರಡನೆ ಮತ್ತು ಮೂರನೆ ಮಹಿಳೆಯ ನಡುವೆ ಇದು ಮತ್ತೆ ಕಾಣುತ್ತಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಕಾಲಿಗೆ ಸರಪಳಿ ತೊಡಿಸಿರುವ ಚಿತ್ರ ಸ್ಟಾನ್ ಸ್ವಾಮಿಯವರದ್ದಲ್ಲ

ಈ ಚಿತ್ರಗಳಿಗಾಗಿ ಇಂಟರ್‌ನೆಟ್‌ನಲ್ಲಿ ಹುಡುಕಿರುವ ಆಲ್ಟ್‌ನ್ಯೂಸ್‌, ಎಬಿಪಿ ನ್ಯೂಸ್‌ನ ಬಂಗಾಳಿ ವಿಭಾಗವಾದ ಎಬಿಪಿ ಆನಂದದ 2017 ರ ವರದಿಯಲ್ಲಿ ವೈರಲ್‌ ಚಿತ್ರವನ್ನು ಪತ್ತೆಹಚ್ಚಿದೆ. ಆದರೆ ಈ ವರದಿಯಲ್ಲಿ ಇರುವ ಅದೇ ಚಿತ್ರದಲ್ಲಿ ಯಾವುದೆ ಸಂಕೋಲೆಗಳಿಲ್ಲ.

ಇದೇ ಚಿತ್ರವನ್ನು ‘ಮಾರ್ಡೆನ್‌ ಡಿಪ್ಲೊಮಸಿ’ 2017 ರ ಲೇಖನದಲ್ಲಿ ಬಳಸಿಕೊಂಡಿದೆ. ಇಲ್ಲಿಯೂ ವೈರಲ್‌ ಚಿತ್ರದಲ್ಲಿ ಇರುವಂತೆ ಯಾವುದೇ ಸಂಕೋಲೆಗಳು ಕಾಣುತ್ತಿಲ್ಲ.

ಇಷ್ಟೇ ಅಲ್ಲದೆ, 2011 ಮತ್ತು 2012 ರಲ್ಲಿ ಬರೆದ ಕೆಲವು ಬ್ಲಾಗ್ ಪೋಸ್ಟ್‌ಗಳಲ್ಲಿ ಕೂಡಾ ಈ ಚಿತ್ರವನ್ನು ಬಳಸಿಕೊಳ್ಳಲಾಗಿದ್ದು, ಅವುಗಳಲ್ಲಿ ಕೂಡಾ ಸಂಕೋಲೆಗಳು ಇಲ್ಲ. [ಲಿಂಕ್ 1 (ಆರ್ಕೈವ್ ಲಿಂಕ್), ಲಿಂಕ್ 2 (ಆರ್ಕೈವ್ ಲಿಂಕ್), ಲಿಂಕ್ 3 (2012 ಆರ್ಕೈವ್ ಲಿಂಕ್), ಲಿಂಕ್ 4 (2016 ಆರ್ಕೈವ್ ಲಿಂಕ್)]

ಇಂಟರ್ನೆಟ್ ಆರ್ಕೈವ್ ಲೈಬ್ರರಿಯನ್ನು ಬಳಸಿ, ಆಲ್ಟ್ ನ್ಯೂಸ್ ಈ ಬ್ಲಾಗ್ ಪೋಸ್ಟ್‌ಗಳ ಆರ್ಕೈವ್‌ ಮಾಡಿದೆ. ವಾಸ್ತವಲ್ಲಿ ಮೂಲ ಫೋಟೋವನ್ನು ಮೇ 2011 ರಲ್ಲಿ ಹಂಚಿಕೊಳ್ಳಲಾಗಿದೆ. ಇದರರ್ಥ ಚಿತ್ರವು ಕನಿಷ್ಠ 10 ವರ್ಷ ಹಳೆಯದಾಗಿದೆ.

ಇದನ್ನೂ ಓದಿ: ಅರಳಿ ಮರದಲ್ಲಿ ಮಾವಿನ ಕಾಯಿ ಬಿಟ್ಟಿದೆ ಎಂಬ ವೈರಲ್ ವಿಡಿಯೋ ಸುಳ್ಳು: ವಾಸ್ತವವೇನು?

ಈ ಎಲ್ಲಾ ಬ್ಲಾಗ್ ಪೋಸ್ಟ್‌ಗಳು ಒಂದೇ ಆಗಿದ್ದು, ಅವುಗಳನ್ನು ಪದಶಃ ಕಾಪಿ ಪೇಸ್ಟ್‌ ಮಾಡಲಾಗಿದೆ. ಎಲ್ಲಾ ಬ್ಲಾಗ್‌ ಪೋಸ್ಟ್‌ಗಳೂ, ಅಮೆರಿಕಾದ ಪತ್ರಕರ್ತೆ ಬಾರ್ಬರಾ ವಾಲ್ಟರ್ಸ್ ಅಫ್ಘಾನಿಸ್ತಾನದಲ್ಲಿ ಕೆಲಸ ಮಾಡುತ್ತಿದ್ದಾಗ, ಅಫ್ಘಾನಿಸ್ತಾನದ ಮಹಿಳೆಯೊಂದಿಗೆ ಮಾತನಾಡಿದ ಘಟನೆಯನ್ನು ವಿವರಿಸುತ್ತದೆ.

2017 ರಲ್ಲಿ ಅಭಿಜಿತ್ ಅಯ್ಯರ್ ಮಿತ್ರ ಅವರು ವಾಟ್ಸಾಪ್ ಅನ್ನು ಉಲ್ಲೇಖಿಸಿ ಟ್ವಿಟರ್‌ನಲ್ಲಿ ಅದೇ ಕಥೆಯನ್ನು ಹಂಚಿಕೊಂಡಿದ್ದಾರೆ. ಆದ್ದರಿಂದ, ಈ ಘಟನೆಯನ್ನು ಹಿಂದೆ ಭಾರತದಲ್ಲೂ ಹಂಚಿಕೊಳ್ಳಲಾಗಿತ್ತು. (ಆರ್ಕೈವ್ ಲಿಂಕ್)

ಬಾರ್ಬರಾ ವಾಲ್ಟರ್ಸ್ ವರದಿ ಮಾಡಿದ ಈ ಘಟನೆಯನ್ನು ಅಮೆರಿಕದ ಪ್ಯಾಕ್ಟ್‌ ಚೆಕಿಂಗ್‌ ಸಂಸ್ಥೆ 2014 ರಲ್ಲಿ ತನಿಖೆ ಮಾಡಿ ಸತ್ಯಾಸತ್ಯತೆಯನ್ನು ಹೊರ ಹಾಕಿದೆ. ಅದು ನಡೆಸಿದ ತನಿಖೆಯಂತೆ ಈ ಘಟನೆಯು ಕೇವಲ ವಿಡಂಬನಾತ್ಮಕ ಎಂದು ತೀರ್ಮಾನಿಸಿದೆ, ಇದು 2001 ರಿಂದ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿವೆ.

ಒಟ್ಟಿನಲ್ಲಿ ಸಂಕ್ಷಿಪ್ತವಾಗಿ ಹೇಳುವುದಾದರೆ, ಸುಮಾರು ಹತ್ತು ವರ್ಷಗಳ ಹಿಂದಿನ ಚಿತ್ರವನ್ನು ಎಡಿಟ್‌ ಮಾಡಿ, ತಾಲಿಬಾ‌ನ್‌‌ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದ ಚಿತ್ರ ಎಂದು ಶೇರ್‌ ಮಾಡಲಾಗುತ್ತಿದೆ.

ಕೃಪೆ: ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ‘ಕೋವಿಶೀಲ್ಡ್ ವ್ಯಾಕ್ಸಿನ್ ಹಾಕಿಸಿಕೊಂಡ ವರ ಬೇಕಾಗಿದ್ದಾನೆ’- ಇದು ನಿಜವಾದ ಪ್ರಕಟಣೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...