Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಈ ಚಿತ್ರವನ್ನು ಬಿಜೆಪಿ ಮುಖಂಡ ನರೇಂದ್ರ ಕುಮಾರ್ ಚಾವ್ಲಾ ಸೇರಿದಂತೆ ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ

- Advertisement -
- Advertisement -

ಮನಾಲಿ ಮತ್ತು ಲಾಹೌಲ್-ಸ್ಪಿತಿ ಕಣಿವೆಯನ್ನು ಸಂಪರ್ಕಿಸುವ 9.2 ಕಿಲೋಮೀಟರ್ ಉದ್ದದ ಅಟಲ್ ಸುರಂಗ ಮಾರ್ಗವನ್ನು ಅಕ್ಟೋಬರ್ 3, ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಟುಡೆ, ನ್ಯೂಸ್ 18, ಟೈಮ್ಸ್ ನೌ ಡಿಜಿಟಲ್ ನಂತಹ ಮಾಧ್ಯಮ ಸಂಸ್ಥೆಗಳು ಮತ್ತು ಇಂಡಿಯಾ ಟೈಮ್ಸ್ ಮತ್ತು ಮೆನ್ಸ್‌ಎಕ್ಸ್‌ಪಿ ಯಂತಹ ವೆಬ್‌ಸೈಟ್‌ಗಳು ಪ್ರಧಾನಿ ಉದ್ಘಾಟಿಸಿದ ಸುರಂಗವನ್ನು ತೋರಿಸಲು ಈ ಚಿತ್ರವನ್ನು ಬಳಸಿವೆ.

ಈ ಚಿತ್ರವನ್ನು ಬಿಜೆಪಿ ಮುಖಂಡ ನರೇಂದ್ರ ಕುಮಾರ್ ಚಾವ್ಲಾ ಸೇರಿದಂತೆ ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಫ್ಯಾಕ್ಟ್‌ಚೆಕ್:

ಮನಾಲಿ ಮತ್ತು ಲಾಹೌಲ್-ಸ್ಪಿತಿಯನ್ನು ಸಂಪರ್ಕಿಸುವ 9.2 ಕಿಲೋಮೀಟರ್ ಉದ್ದದ ಅಟಲ್ ಸುರಂಗವನ್ನು ಪ್ರಧಾನ ಮಂತ್ರಿ ಉದ್ಘಾಟಿಸಿದ ನಂತರ, ಹಲವಾರು ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ಚಿತ್ರವು ಕ್ಯಾಲಿಫೋರ್ನಿಯಾದ ಡೆವಿಲ್ಸ್ ಸ್ಲೈಡ್ ಸುರಂಗದ ಚಿತ್ರವಾಗಿದೆ. ಇದನ್ನು ಅಟಲ್ ಸುರಂಗ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಈ ಚಿತ್ರವು ಕ್ಯಾಲಿಫೋರ್ನಿಯಾ ಮೂಲದ ಕಂಪನಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಚಿತ್ರ ಎಂದು ತಿಳಿದುಬಂತು. ಆದರೆ ಈ ಚಿತ್ರವನ್ನು ಬೇರೆ ಕೋನದಿಂದ ತೆಗೆದುಕೊಳ್ಳಲಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ವೆಬ್‌ಸೈಟ್‌ನಲ್ಲಿ ಒದಗಿಸಲಾದ ವಿವರಣೆಯ ಪ್ರಕಾರ, ಈ ಚಿತ್ರವು ಕ್ಯಾಲಿಫೋರ್ನಿಯಾದಲ್ಲಿ 2012 ರಲ್ಲಿ ನಿರ್ಮಿಸಲಾದ ಡೆವಿಲ್ಸ್ ಸ್ಲೈಡ್ ಬೈ-ಪಾಸ್ (Devil’s Slide By-Pass Tunnels) ಸುರಂಗಗಳದ್ದಾಗಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಂತರ ಗೂಗಲ್‌ನಲ್ಲಿ Devil’s Slide By-Pass Tunnels ಎನ್ನುವ ಕೀವರ್ಡ್‌ಗಳನ್ನು ಹುಡುಕಾಡಿದಾಗ ಕ್ರೂಸರ್ ಸ್ಟೈಲ್.ಕಾಮ್ ಎಂಬ ವೆಬ್‌ಗೆ ಕರೆದೊಯ್ಯಿತು. ಇದರಲ್ಲಿ 2012 ರ ಆಗಸ್ಟ್‌ನಲ್ಲಿ ಈ ಚಿತ್ರಗಳನ್ನು ಅಪ್‌ಲೋಡ್ ಮಾಡಲಾಗಿತ್ತು. ಇದರಲ್ಲಿ ಈ ಟನಲ್‌ಗೆ ಸಂಬಂಧಸಿದಂತೆ ಹತ್ತಾರು ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ.

ಟಾಮ್ ಲ್ಯಾಂಟೋಸ್ ಸುರಂಗಗಳು ಎಂದೂ ಕರೆಯಲ್ಪಡುವ ಈ ಡೆವಿಲ್ಸ್ ಸ್ಲೈಡ್ ಸುರಂಗಗಳು ಅಮೇರಿಕಾದಲ್ಲಿರುವ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊ ​​ಪೆನಿನ್ಸುಲಾದ ಎರಡು ಸುರಂಗಗಳಾಗಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಡೆವಿಲ್ಸ್ ಸ್ಲೈಡ್ ಸುರಂಗಗಳ ಉದ್ಘಾಟನೆಯ ಯೂಟ್ಯೂಬ್ ವೀಡಿಯೊವನ್ನೂ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಹಾಗಾಗಿ ಇದರಿಂದ ತಿಳಿದುಬರುವುದೇನೆಂದರೆ ಅಮೇರಿಕಾ ಸುರಂಗವನ್ನು ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...