Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಫ್ಯಾಕ್ಟ್‌ಚೆಕ್: ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ಅಮೇರಿಕಾ ಸುರಂಗದ ಚಿತ್ರ ಹಂಚಿಕೊಂಡ ಮಾಧ್ಯಮಗಳು!

ಈ ಚಿತ್ರವನ್ನು ಬಿಜೆಪಿ ಮುಖಂಡ ನರೇಂದ್ರ ಕುಮಾರ್ ಚಾವ್ಲಾ ಸೇರಿದಂತೆ ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ

- Advertisement -
- Advertisement -

ಮನಾಲಿ ಮತ್ತು ಲಾಹೌಲ್-ಸ್ಪಿತಿ ಕಣಿವೆಯನ್ನು ಸಂಪರ್ಕಿಸುವ 9.2 ಕಿಲೋಮೀಟರ್ ಉದ್ದದ ಅಟಲ್ ಸುರಂಗ ಮಾರ್ಗವನ್ನು ಅಕ್ಟೋಬರ್ 3, ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಟುಡೆ, ನ್ಯೂಸ್ 18, ಟೈಮ್ಸ್ ನೌ ಡಿಜಿಟಲ್ ನಂತಹ ಮಾಧ್ಯಮ ಸಂಸ್ಥೆಗಳು ಮತ್ತು ಇಂಡಿಯಾ ಟೈಮ್ಸ್ ಮತ್ತು ಮೆನ್ಸ್‌ಎಕ್ಸ್‌ಪಿ ಯಂತಹ ವೆಬ್‌ಸೈಟ್‌ಗಳು ಪ್ರಧಾನಿ ಉದ್ಘಾಟಿಸಿದ ಸುರಂಗವನ್ನು ತೋರಿಸಲು ಈ ಚಿತ್ರವನ್ನು ಬಳಸಿವೆ.

ಈ ಚಿತ್ರವನ್ನು ಬಿಜೆಪಿ ಮುಖಂಡ ನರೇಂದ್ರ ಕುಮಾರ್ ಚಾವ್ಲಾ ಸೇರಿದಂತೆ ಹಲವಾರು ಬಳಕೆದಾರರು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಗುಜರಾತ್‌ನಲ್ಲಿ ಕ್ರೂಸ್ ಹಡಗು ಸೇವೆಯನ್ನು ಪ್ರಾರಂಭಿಸಿದ್ದಾರೆಯೇ? ಇಲ್ಲಿದೆ ವಿವರ

ಫ್ಯಾಕ್ಟ್‌ಚೆಕ್:

ಮನಾಲಿ ಮತ್ತು ಲಾಹೌಲ್-ಸ್ಪಿತಿಯನ್ನು ಸಂಪರ್ಕಿಸುವ 9.2 ಕಿಲೋಮೀಟರ್ ಉದ್ದದ ಅಟಲ್ ಸುರಂಗವನ್ನು ಪ್ರಧಾನ ಮಂತ್ರಿ ಉದ್ಘಾಟಿಸಿದ ನಂತರ, ಹಲವಾರು ಮಾಧ್ಯಮ ಸಂಸ್ಥೆಗಳು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ಚಿತ್ರವು ಕ್ಯಾಲಿಫೋರ್ನಿಯಾದ ಡೆವಿಲ್ಸ್ ಸ್ಲೈಡ್ ಸುರಂಗದ ಚಿತ್ರವಾಗಿದೆ. ಇದನ್ನು ಅಟಲ್ ಸುರಂಗ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಈ ಚಿತ್ರವು ಕ್ಯಾಲಿಫೋರ್ನಿಯಾ ಮೂಲದ ಕಂಪನಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಚಿತ್ರ ಎಂದು ತಿಳಿದುಬಂತು. ಆದರೆ ಈ ಚಿತ್ರವನ್ನು ಬೇರೆ ಕೋನದಿಂದ ತೆಗೆದುಕೊಳ್ಳಲಾಗಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ವೆಬ್‌ಸೈಟ್‌ನಲ್ಲಿ ಒದಗಿಸಲಾದ ವಿವರಣೆಯ ಪ್ರಕಾರ, ಈ ಚಿತ್ರವು ಕ್ಯಾಲಿಫೋರ್ನಿಯಾದಲ್ಲಿ 2012 ರಲ್ಲಿ ನಿರ್ಮಿಸಲಾದ ಡೆವಿಲ್ಸ್ ಸ್ಲೈಡ್ ಬೈ-ಪಾಸ್ (Devil’s Slide By-Pass Tunnels) ಸುರಂಗಗಳದ್ದಾಗಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ನಂತರ ಗೂಗಲ್‌ನಲ್ಲಿ Devil’s Slide By-Pass Tunnels ಎನ್ನುವ ಕೀವರ್ಡ್‌ಗಳನ್ನು ಹುಡುಕಾಡಿದಾಗ ಕ್ರೂಸರ್ ಸ್ಟೈಲ್.ಕಾಮ್ ಎಂಬ ವೆಬ್‌ಗೆ ಕರೆದೊಯ್ಯಿತು. ಇದರಲ್ಲಿ 2012 ರ ಆಗಸ್ಟ್‌ನಲ್ಲಿ ಈ ಚಿತ್ರಗಳನ್ನು ಅಪ್‌ಲೋಡ್ ಮಾಡಲಾಗಿತ್ತು. ಇದರಲ್ಲಿ ಈ ಟನಲ್‌ಗೆ ಸಂಬಂಧಸಿದಂತೆ ಹತ್ತಾರು ಚಿತ್ರಗಳನ್ನು ಪೋಸ್ಟ್ ಮಾಡಲಾಗಿದೆ.

ಟಾಮ್ ಲ್ಯಾಂಟೋಸ್ ಸುರಂಗಗಳು ಎಂದೂ ಕರೆಯಲ್ಪಡುವ ಈ ಡೆವಿಲ್ಸ್ ಸ್ಲೈಡ್ ಸುರಂಗಗಳು ಅಮೇರಿಕಾದಲ್ಲಿರುವ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊ ​​ಪೆನಿನ್ಸುಲಾದ ಎರಡು ಸುರಂಗಗಳಾಗಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಡೆವಿಲ್ಸ್ ಸ್ಲೈಡ್ ಸುರಂಗಗಳ ಉದ್ಘಾಟನೆಯ ಯೂಟ್ಯೂಬ್ ವೀಡಿಯೊವನ್ನೂ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಹಾಗಾಗಿ ಇದರಿಂದ ತಿಳಿದುಬರುವುದೇನೆಂದರೆ ಅಮೇರಿಕಾ ಸುರಂಗವನ್ನು ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಗಾಲ್ವಾನ್‌ ಕಣಿವೆಯಲ್ಲಿ ಸಾವಿಗೀಡಾದ ಚೀನಾ ಸೈನಿಕರ ಸಮಾಧಿಯೆಂದು ಹಳೆಯ ಚಿತ್ರಗಳನ್ನು ಪ್ರಸಾರ ಮಾಡಿದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...