Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ...

ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್, ಮಾಧುರಿ ದೀಕ್ಷಿತ್ ಅವರ ಹಾಡು ‘ಚಾನೆ ಕೆ ಖೇತ್ ಮೇ’ ಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ನಟನು ತನ್ನ ಸೋದರ ಸೊಸೆ ಮಲ್ಲಿಕಾ ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಸಂದೇಶಗಳು ಸೇರಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಷ್ಟೇ ಅಲ್ಲದೆ ಆಜ್‌‌ತಕ್ ಹಿಂದಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕಿ ಅಂಜನಾ ಓಂ ಕಶ್ಯಪ್ “ಸುಶಾಂತ್ ಸಿಂಗ್ ರಜಪೂತ್ ಅವರ ಈ ವಿಡಿಯೋವನ್ನೂ ನೋಡಿ. ಮಾವ-ಸೋದರ ಸೊಸೆಯ ಮೋಜು. ಕುಟುಂಬದ ಪ್ರೀತಿ! ಹಿರಿಯ ಸಹೋದರಿ ರಾಣಿಯ ಮಗಳು ಮಲ್ಲಿಕಾ ಸಿಂಗ್ ಅವರೊಂದಿಗೆ ಸುಶಾಂತ್ ನೃತ್ಯ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಸುಶಾಂತ್ ಸಿಂಗ್ ರಜಪೂತ್‌ ಕುಟುಂಬದಲ್ಲಿ ಎಲ್ಲರೂ ಚೆನ್ನಾಗಿಯೇ ಇದ್ದರು, “ಅಸಮಾಧಾನ” ದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲು ಟೈಮ್ಸ್ ನೌ ಈ ವೀಡಿಯೊವನ್ನು ಇಟ್ಟುಕೊಂಡು ಬುಲೆಟಿನ್ ಶೋ ಮಾಡಿತ್ತು.

ಆರ್ಕೈವ್ ಇಲ್ಲಿದೆ.

ಅಲ್ಲದೆ ಇದನ್ನು Times of India ಮತ್ತು Aaj Tak ನಂತಹ ಸುದ್ದಿ ಸಂಸ್ಥೆಗಳು ಕೂಡಾ ವರದಿ ಮಾಡಿವೆ.

ಆರ್ಕೈವ್‌ ಇಲ್ಲದೆ.
ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಎಬಿಪಿ ನ್ಯೂಸ್ ಹಿಂದಿ ಮತ್ತು ಇಂಡಿಯಾ ಟಿವಿಯೂ ಸಹ ಈ ವೈರಲ್ ವಿಡಿಯೋವನ್ನು ”ಸುಶಾಂತ್‌ ಸಿಂಗ್ ಅವರ ಸೋದರ ಸೊಸೆಯೊಂದಿಗಿನ ವಿಡಿಯೋ” ಎಂದು ವರದಿ ಮಾಡಿದೆ, ಆದರೆ ನಂತರ ಅದನ್ನು ತೆಗೆದು ಹಾಕಿದೆ.

ಫ್ಯಾಕ್ಟ್‌‌ಚೆಕ್

ವಾಸ್ತವವಾಗಿ ವಿಡಿಯೋದಲ್ಲಿ ಇರುವುದು ಸುಶಾಂತ್ ಸಿಂಗ್ ರಜಪೂತ್ ಆಗಿದ್ದರೂ ಅವರ ಜೊತೆ ನೃತ್ಯ ಮಾಡುತ್ತಿರುವುದು ಅವರ ಸೋದರ ಸೊಸೆಯಲ್ಲ, ನೃತ್ಯ ಸಂಯೋಜಕಿ ಮನ್‌ಪ್ರೀತ್ ಟೂರ್ ಆಗಿದ್ದಾರೆ. ಈ ವಿಡಿಯೊ 2017 ದ್ದಾಗಿದೆ.

ವೈರಲ್ ವೀಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಪಿಂಕ್‌ವಿಲ್ಲ ಎಂಬ ವೆಬ್‌ಸೈಟಿನಲ್ಲಿರುವ ಲೇಖನವನ್ನು ತೋರಿಸಿದೆ. ಇದರಲ್ಲಿ ವಿಡಿಯೊ ಸಹ ಇದೆ. ಇದರ ವರದಿಯಲ್ಲಿ “ಸುಶಾಂತ್ ಯೂಟ್ಯೂಬರ್ ಮತ್ತು ನೃತ್ಯ ಸಂಯೋಜಕಿ ಮನ್ಪ್ರೀತ್ ಟೂರ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಜೋಡಿ ಮಾಧುರಿ ದೀಕ್ಷಿತ್ ಅವರ ಜನಪ್ರಿಯ ಹಾಡು ‘ಚಾನೆ ಕೆ ಖೇತ್ ಮೇ’ ನಲ್ಲಿ ನೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಉತ್ಸಾಹಭರಿತ ವ್ಯಕ್ತಿತ್ವ ಹೊಂದಿದ್ದನೆಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ” ಎಂದು ಬರೆಯಲಾಗಿದೆ.

ನಂತರ ಕೀವರ್ಡ್ ಮೂಲಕ ಹುಡುಕಾಡಿದಾಗ ಜೂನ್ 4 2017 ರಂದು ಮನ್‌ಪ್ರೀತ್ ಟೂರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ಗೆ ಅಪ್‌ಲೋಡ್ ಮಾಡಿದ ಚಿತ್ರವನ್ನು ಕಾಣಬಹುದು. ಅದಲ್ಲಿ ಮನ್‌ಪ್ರೀತ್‌ ಮತ್ತು ಸುಶಾಂತ್ ವೈರಲ್ ವಿಡಿಯೊದಲ್ಲಿ ಇರುವ ಬಟ್ಟೆಯಲ್ಲಿ ಕಾಣಬಹುದಾಗಿದೆ.

ಮನ್‌ಪ್ರೀತ್ ತನ್ನ ನಿನ್ನೆ ತನ್ನ ಇನ್ಸ್ಟ್ರಾಗ್ರಾಮ್‌ನಲ್ಲಿ ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. “ನಾವು ಪತ್ರಿಕೆಯಲ್ಲಿ ಓದಿದ ಎಲ್ಲವನ್ನೂ ನಂಬಲು ಸಾಧ್ಯವಿಲ್ಲ. ಆದರೆ ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಅವರು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ವಿಡಿಯೋ ಸುಶಾಂತ್ ಸಿಂಗ್ ರಜಪೂತ್ ತನ್ನ ಸೋದರ ಸೊಸೆಯೊಂದಿಗೆ ನೃತ್ಯ ಮಾಡುತ್ತಿದ್ದಂತೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...