Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ...

ಫ್ಯಾಕ್ಟ್‌ಚೆಕ್: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

- Advertisement -
- Advertisement -

ನಟ ಸುಶಾಂತ್ ಸಿಂಗ್ ರಜಪೂತ್, ಮಾಧುರಿ ದೀಕ್ಷಿತ್ ಅವರ ಹಾಡು ‘ಚಾನೆ ಕೆ ಖೇತ್ ಮೇ’ ಗೆ ನೃತ್ಯ ಮಾಡುತ್ತಿರುವ ವೈರಲ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ ನಟನು ತನ್ನ ಸೋದರ ಸೊಸೆ ಮಲ್ಲಿಕಾ ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ ಎಂಬ ಸಂದೇಶಗಳು ಸೇರಿ ವ್ಯಾಪಕವಾಗಿ ಹರಿದಾಡುತ್ತಿದೆ.

ಅಷ್ಟೇ ಅಲ್ಲದೆ ಆಜ್‌‌ತಕ್ ಹಿಂದಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕ ಸಂಪಾದಕಿ ಅಂಜನಾ ಓಂ ಕಶ್ಯಪ್ “ಸುಶಾಂತ್ ಸಿಂಗ್ ರಜಪೂತ್ ಅವರ ಈ ವಿಡಿಯೋವನ್ನೂ ನೋಡಿ. ಮಾವ-ಸೋದರ ಸೊಸೆಯ ಮೋಜು. ಕುಟುಂಬದ ಪ್ರೀತಿ! ಹಿರಿಯ ಸಹೋದರಿ ರಾಣಿಯ ಮಗಳು ಮಲ್ಲಿಕಾ ಸಿಂಗ್ ಅವರೊಂದಿಗೆ ಸುಶಾಂತ್ ನೃತ್ಯ ಮಾಡುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಸುಶಾಂತ್ ಸಿಂಗ್ ರಜಪೂತ್‌ ಕುಟುಂಬದಲ್ಲಿ ಎಲ್ಲರೂ ಚೆನ್ನಾಗಿಯೇ ಇದ್ದರು, “ಅಸಮಾಧಾನ” ದ ಯಾವುದೇ ಲಕ್ಷಣಗಳಿಲ್ಲ ಎಂದು ಹೇಳಲು ಟೈಮ್ಸ್ ನೌ ಈ ವೀಡಿಯೊವನ್ನು ಇಟ್ಟುಕೊಂಡು ಬುಲೆಟಿನ್ ಶೋ ಮಾಡಿತ್ತು.

ಆರ್ಕೈವ್ ಇಲ್ಲಿದೆ.

ಅಲ್ಲದೆ ಇದನ್ನು Times of India ಮತ್ತು Aaj Tak ನಂತಹ ಸುದ್ದಿ ಸಂಸ್ಥೆಗಳು ಕೂಡಾ ವರದಿ ಮಾಡಿವೆ.

ಆರ್ಕೈವ್‌ ಇಲ್ಲದೆ.
ಆರ್ಕೈವ್ ಇಲ್ಲಿದೆ

ಅಷ್ಟೇ ಅಲ್ಲದೆ ಎಬಿಪಿ ನ್ಯೂಸ್ ಹಿಂದಿ ಮತ್ತು ಇಂಡಿಯಾ ಟಿವಿಯೂ ಸಹ ಈ ವೈರಲ್ ವಿಡಿಯೋವನ್ನು ”ಸುಶಾಂತ್‌ ಸಿಂಗ್ ಅವರ ಸೋದರ ಸೊಸೆಯೊಂದಿಗಿನ ವಿಡಿಯೋ” ಎಂದು ವರದಿ ಮಾಡಿದೆ, ಆದರೆ ನಂತರ ಅದನ್ನು ತೆಗೆದು ಹಾಕಿದೆ.

ಫ್ಯಾಕ್ಟ್‌‌ಚೆಕ್

ವಾಸ್ತವವಾಗಿ ವಿಡಿಯೋದಲ್ಲಿ ಇರುವುದು ಸುಶಾಂತ್ ಸಿಂಗ್ ರಜಪೂತ್ ಆಗಿದ್ದರೂ ಅವರ ಜೊತೆ ನೃತ್ಯ ಮಾಡುತ್ತಿರುವುದು ಅವರ ಸೋದರ ಸೊಸೆಯಲ್ಲ, ನೃತ್ಯ ಸಂಯೋಜಕಿ ಮನ್‌ಪ್ರೀತ್ ಟೂರ್ ಆಗಿದ್ದಾರೆ. ಈ ವಿಡಿಯೊ 2017 ದ್ದಾಗಿದೆ.

ವೈರಲ್ ವೀಡಿಯೊವನ್ನು ರಿವರ್ಸ್ ಸರ್ಚ್ ಮಾಡಿದಾಗ ಅದು ಪಿಂಕ್‌ವಿಲ್ಲ ಎಂಬ ವೆಬ್‌ಸೈಟಿನಲ್ಲಿರುವ ಲೇಖನವನ್ನು ತೋರಿಸಿದೆ. ಇದರಲ್ಲಿ ವಿಡಿಯೊ ಸಹ ಇದೆ. ಇದರ ವರದಿಯಲ್ಲಿ “ಸುಶಾಂತ್ ಯೂಟ್ಯೂಬರ್ ಮತ್ತು ನೃತ್ಯ ಸಂಯೋಜಕಿ ಮನ್ಪ್ರೀತ್ ಟೂರ್ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ಜೋಡಿ ಮಾಧುರಿ ದೀಕ್ಷಿತ್ ಅವರ ಜನಪ್ರಿಯ ಹಾಡು ‘ಚಾನೆ ಕೆ ಖೇತ್ ಮೇ’ ನಲ್ಲಿ ನೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಉತ್ಸಾಹಭರಿತ ವ್ಯಕ್ತಿತ್ವ ಹೊಂದಿದ್ದನೆಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ” ಎಂದು ಬರೆಯಲಾಗಿದೆ.

ನಂತರ ಕೀವರ್ಡ್ ಮೂಲಕ ಹುಡುಕಾಡಿದಾಗ ಜೂನ್ 4 2017 ರಂದು ಮನ್‌ಪ್ರೀತ್ ಟೂರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ಗೆ ಅಪ್‌ಲೋಡ್ ಮಾಡಿದ ಚಿತ್ರವನ್ನು ಕಾಣಬಹುದು. ಅದಲ್ಲಿ ಮನ್‌ಪ್ರೀತ್‌ ಮತ್ತು ಸುಶಾಂತ್ ವೈರಲ್ ವಿಡಿಯೊದಲ್ಲಿ ಇರುವ ಬಟ್ಟೆಯಲ್ಲಿ ಕಾಣಬಹುದಾಗಿದೆ.

ಮನ್‌ಪ್ರೀತ್ ತನ್ನ ನಿನ್ನೆ ತನ್ನ ಇನ್ಸ್ಟ್ರಾಗ್ರಾಮ್‌ನಲ್ಲಿ ಸ್ಪಷ್ಟೀಕರಣವನ್ನು ಸಹ ನೀಡಿದ್ದಾರೆ. “ನಾವು ಪತ್ರಿಕೆಯಲ್ಲಿ ಓದಿದ ಎಲ್ಲವನ್ನೂ ನಂಬಲು ಸಾಧ್ಯವಿಲ್ಲ. ಆದರೆ ಇದನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಅವರು ವೈರಲ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ವಿಡಿಯೋ ಸುಶಾಂತ್ ಸಿಂಗ್ ರಜಪೂತ್ ತನ್ನ ಸೋದರ ಸೊಸೆಯೊಂದಿಗೆ ನೃತ್ಯ ಮಾಡುತ್ತಿದ್ದಂತೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...