Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...