Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...