Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...