Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

ಫ್ಯಾಕ್ಟ್‌ಚೆಕ್‌: ಗರ್ಭಿಣಿಯನ್ನು ಬಾಲಕಿ ರಕ್ಷಿಸುವ ವಿಡಿಯೊ ನಿಜವಾದ ಘಟನೆಯದ್ದಲ್ಲ

- Advertisement -
- Advertisement -

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆಟೋ ರಿಕ್ಷಾ ಚಾಲಕನೊಬ್ಬ ತನ್ನ ಆಟೋ ರಿಕ್ಷಾದೊಳಗೆ ಕುಳಿತು, ನೋವಿನಿಂದ ಬಳಲುತ್ತಿರುವ ಗರ್ಭಿಣಿಗೆ ಸಹಾಯ ಮಾಡುವಂತೆ ಪ್ರಯಾಣಿಕರನ್ನು ಬೇಡಿಕೊಳ್ಳುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಹಲವು ಪ್ರಯತ್ನಗಳ ನಂತರ, ಆಟೋ ಚಾಲಕನ ಮನವಿಯನ್ನು ಗಮನಿಸಿ ಬಿಎಂಡಬ್ಲ್ಯೂ ಕಾರು ನಿಲ್ಲುತ್ತದೆ. ಬಾಲಕಿಯೊಬ್ಬಳು ಕಾರಿನಿಂದ ಹೊರಬರುವುದನ್ನು ವಿಡಿಯೊದಲ್ಲಿ ನೋಡಬಹುದು. ಗರ್ಭಿಣಿಗೆ ಬಾಲಕಿ ನೀರು ನೀಡಿ ಆಸ್ಪತ್ರೆಗೆ ಕರೆದೊಯ್ದು ರಕ್ಷಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಮಾನವೀಯತೆಯನ್ನು ಪ್ರತಿಪಾದಿಸುವ ಈ ವಿಡಿಯೊ ಸಂದೇಶ ನಿಜಕ್ಕೂ ಮಹತ್ವದ್ದು. ಆದರೆ ಇದನ್ನು ನಿಜವಾಗಿ ನಡೆದ ಘಟನೆಯೆಂದು ಪ್ರತಿಪಾದಿಸುತ್ತಿರುವುದು ಸತ್ಯಕ್ಕೆ ದೂರವಾಗಿದೆ.

ಸತ್ಯಾಂಶವೇನು? ಯಾವುದರ ವಿಡಿಯೊವಿದು?

ವೀಡಿಯೊದಲ್ಲಿನ ಸ್ಕ್ರೀನ್‌ಶಾಟ್‌ಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಡಿಸೆಂಬರ್ 06, 2021ರಂದು ಜಮ್ಮು ಮತ್ತು ಕಾಶ್ಮೀರ ಪೀಸ್ ಫೌಂಡೇಶನ್ ಫೇಸ್‌ಬುಕ್ ಪುಟದಲ್ಲಿ ಇದೇ ರೀತಿಯ ದೃಶ್ಯಗಳನ್ನು ಹೊಂದಿರುವ ವೀಡಿಯೊ ಕಂಡುಬಂದಿದೆ. ಮಕ್ಕಳಲ್ಲಿ ಮತ್ತು ಸಮಾಜದ ಜನರಲ್ಲಿ ಮಾನವೀಯತೆಯನ್ನು ಪ್ರೇರೇಪಿಸಲು ರಚಿಸಲಾದ ಸ್ಕ್ರಿಪ್ಟ್‌ ಇದಾಗಿದೆ ಎಂದು ವೀಡಿಯೊದ ವಿವರಣೆಯು ಹೇಳುತ್ತದೆ. ಈ ಫೇಸ್‌ಬುಕ್ ಪೇಜ್‌ ಮನರಂಜನೆ, ಶೈಕ್ಷಣಿಕ ಉದ್ದೇಶಗಳಿಗಾಗಿ ಸ್ಕ್ರಿಪ್ಟ್ ಮಾಡಿದ ನಾಟಕಗಳು ಮತ್ತು ವಿಡಂಬನೆಗಳನ್ನು ಒಳಗೊಂಡಿರುತ್ತದೆ ಎಂದು ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ.

ಅಲ್ಲದೆ, ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ವೀಡಿಯೊಗಳನ್ನು ವೀಕ್ಷಕರು ‘LOBO 619’ ಫೇಸ್‌ಬುಕ್ ಪುಟದಲ್ಲೂ ನೋಡಬಹುದು ಎಂದು ಈ ಫೇಸ್‌ಬುಕ್ ಪೋಸ್ಟ್ ಶಿಫಾರಸು ಮಾಡುತ್ತದೆ. ಇದೇ ರೀತಿಯ ಶೈಕ್ಷಣಿಕ ಮತ್ತು ಜಾಗೃತಿ ವೀಡಿಯೊಗಳನ್ನು ‘LOBO 619’ Facebook ಪುಟದಲ್ಲಿ ಪ್ರಕಟಿಸಲಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ತೆಲಂಗಾಣ ರಾಜ್ಯದ ಹೈದ್ರಾಬಾದ್‌ ಹಾಸ್ಯ ಕಲಾವಿದ ಮೊಹಮ್ಮದ್ ಖಯ್ಯೂಮ್ ಅವರು ಲೋಬೋ ಎಂದು ಜನಪ್ರಿಯವಾಗಿದ್ದಾರೆ.

ಈ ಹಿಂದೆ, ಲೈಂಗಿಕ ಕಿರುಕುಳ ಸಂಬಂಧಿಸಿದಂತೆ ಇದೇ ರೀತಿಯ ಜಾಗೃತಿ ವೀಡಿಯೊವು ಕೋಮುದ್ವೇಷ ಪ್ರತಿಪಾದನೆಯೊಂದಿಗೆ ವೈರಲ್ ಆಗಿದ್ದಾಗ ಸತ್ಯಾಂಶವನ್ನು ಪತ್ತೆ ಹಚ್ಚಿ ಪ್ರಕಟಿಸಲಾಗಿತ್ತು. ಅದನ್ನು ಇಲ್ಲಿ ನೋಡಬಹುದು.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪೂರ್ವ ನಿಯೋಜಿತ ವೀಡಿಯೊವನ್ನು “ಬಾಲಕಿಯು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ” ಎಂದು ತಪ್ಪಾಗಿ ಪ್ರತಿಪಾದಿಸಿ ಹಂಚಿಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...