Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...