Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...