Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...