Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...