Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...