Homeಕರ್ನಾಟಕಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ಫ್ಯಾಕ್ಟ್‌ಚೆಕ್‌: ಈ ಚ್ರಿತ್ರಗಳು ಬೆಂಗಳೂರು ಹಿಂಸಾಚಾರದ್ದಲ್ಲ, ದೆಹಲಿಯದ್ದು..

ದೆಹಲಿಗಲಭೆಯ ಚಿತ್ರವನ್ನು ಬೆಂಗಳೂರಿನ ಗಲಭೆಯ ಚಿತ್ರವೆಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಇದೇ 11 ರ ಮಂಗಳವಾರ, ಪೂರ್ವ ಬೆಂಗಳೂರಿನಲ್ಲಿ ಪ್ರವಾದಿ ಮೊಹಮ್ಮದ್‍ ಅವರನ್ನು ಫೇಸ್‍ಬುಕ್ ಪೋಸ್ಟ್ ಒಂದರಲ್ಲಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನೆ ನಡೆದಿದ್ದವು. ಈ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ನಾಂದಿ ಹಾಡಿದ್ದು ಪೊಲೀಸ್ ಠಾಣೆ ಮತ್ತು ಶಾಸಕರ ಮನೆಯ ಮೇಲೆ ದಾಳಿಗಳು ನಡೆದಿತ್ತು. ಅಂದಿನ ಹಿಂಸಾಚಾರದ ಚಿತ್ರಗಳು ಎಂದು ಹಲವಾರು ಸಾಮಾಜಿಕ ಬಳಕೆದಾರರು ದೆಹಲಿ ಗಲಭೆಯ ಚಿತ್ರಗಳನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಅಲ್ಲದೆ ವೈರಲ್ ಸಂದೇಶದಲ್ಲಿ ಗಲಭೆಗೆ ಕಾರಣ ಬಿಜೆಪಿ ಶಾಸಕನ ಪುತ್ರ ಎಂದು ಉಲ್ಲೇಖಿಸಲಾಗಿದೆ. ವೈರಲ್ ಸಂದೇಶದಲ್ಲಿ, “ಬಿಜೆಪಿ ಶಾಸಕರ ಪುತ್ರ ಪ್ರವಾದಿ ಮುಹಮ್ಮದ್ (ಸ) ಅವರನ್ನು ಅವಮಾನಿಸಿದ್ದಾರೆ. 60 ಪೊಲೀಸರು ಗಾಯಗೊಂಡಿದ್ದಾರೆ, 2 ನಾಗರಿಕರು ಸಾವಿಗೀಡಾಗಿದ್ದಾರೆ, ಸೆಕ್ಷನ್ 144 ವಿಧಿಸಲಾಗಿದೆ (ಸಿಕ್)” ಎಂದು ದೆಹಲಿ ಗಲಭೆಯ ಎರಡು ಚಿತ್ರಗಳ ಜೊತೆ ವೈರಲಾಗಿದೆ.

ಫ್ಯಾಕ್ಟ್‌ಚೆಕ್

ಮೊದಲೆನೆಯದ್ದಾಗಿ ಗಲಭೆಗೆ ಕಾರಣವಾದ ಘಟನೆ ಪ್ರವಾದಿ ಮೊಹಮ್ಮದರ ಅವಹೇಳನವಾಗಿದ್ದರೂ ಅದಕ್ಕೆ ಕಾರಣ ಬಿಜೆಪಿ ಶಾಸಕನ ಮಗ ಅಲ್ಲ. ನವೀನ್ ಎಂಬಾತ ಇದರ ಆರೋಪಿಯಾಗಿದ್ದು ಆತ ಕಾಂಗ್ರೆಸ್ ಶಾಸಕರ ಅಕ್ಕನ ಮಗನಾಗಿದ್ದಾರೆ. ಅಲ್ಲದೆ ಈ ಕಾಂಗ್ರೆಸ್ ಶಾಸಕ ತನಗೂ ತನ್ನ ಅಕ್ಕನ ಮಗನಿಗೂ ಕಳೆದ ಹತ್ತು ವರ್ಷದಿಂದ ಸಂಪರ್ಕ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಎರಡನೆಯದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಚಿತ್ರಗಳು ನಿಜಕ್ಕೂ ಹಳೆಯ ಚಿತ್ರಗಳಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದ ಸಮಯದಲ್ಲಿ ನಡೆದ ಈಶಾನ್ಯ ದೆಹಲಿಯ ಹಿಂಸಾಚಾರದ್ದಾಗಿದೆ.

ಒಂದನೇ ಚಿತ್ರ;

ಮೇಲಿನ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ ಈ ಚಿತ್ರದ ಬಗೆಗಿನ ಹಲವಾರು ವರದಿಗಳನ್ನು ನೋಡಬಹುದಾಗಿದೆ.

ನ್ಯೂಸ್ 18 ವರದಿಯೊಂದು, “ದೆಹಲಿ ಹಿಂಸಾಚಾರ: ಸಿಎಎ ಪ್ರತಿಭಟನೆಗಳ ನಂತರ ಭೀಕರ ಗಲಭೆಗಳು ಭುಗಿಲೆದ್ದವು; ಚಿತ್ರಗಳನ್ನು ನೋಡಿ” ಎಂಬ ಶೀರ್ಷಿಕೆಯ ಅಡಿಯಲ್ಲಿ ಮೇಲಿನ ಚಿತ್ರವನ್ನು ಕಾಣಬಹುದಾಗಿದೆ.

ಚಿತ್ರವನ್ನು ಪಿಟಿಐ ಛಾಯಾಗ್ರಾಹಕ ರವಿ ಚೌಧರಿ ಕ್ಲಿಕ್ ಮಾಡಿದ್ದಾರೆ.

ಎರಡನೇ ಚಿತ್ರ

ಈ ಚಿತ್ರವನ್ನು ಕೂಡಾ ರಿವರ್ಸ್ ಇಮೇಜ್ ಹುಡುಕಾಟ ಮಾಡಿದಾಗ ದೆಹಲಿಯ ಹಿಂಸಾಚಾರದ ಕುರಿತು ಹಲವಾರು ಸುದ್ದಿಗಳಲ್ಲಿ ಇದನ್ನು ನೋಡಬಹುದು.

ಪುಣೆ ಮಿರರ್ ಪ್ರಕಟಿಸಿದ ಲೇಖನವೊಂದರಲ್ಲಿ, “ಜಿ ಕಿಶನ್ ರೆಡ್ಡಿ: ಡೊನಾಲ್ಡ್ ಟ್ರಂಪ್ ಅವರ ಭೇಟಿಯ ಸಮಯದಲ್ಲಿ ಭಾರತದ ಚಿತ್ರಣವನ್ನು ಕೆಡಿಸುವ ಗುರಿಯನ್ನು ಹೊಂದಿರುವ ದೆಹಲಿ ಗಲಭೆಗಳು” ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಪ್ರಕಟಿಸಲಾಗಿದೆ.

ಛಾಯಾಚಿತ್ರವನ್ನು ಟೈಮ್ಸ್ ಆಫ್ ಇಂಡಿಯಾದ ಫೋಟೊ ಜರ್ನಲಿಸ್ಟ್ ಅನಿಂದ್ಯಾ ಚಟ್ಟೋಪಾಧ್ಯಾಯ ಕ್ಲಿಕ್ ಮಾಡಿದ್ದಾರೆ.

ಸ್ಪಷ್ಟವಾಗಿ ಹೇಳಬೇಕಾದರೆ, ಬೆಂಗಳೂರಿನಲ್ಲಿ ಹಿಂಸಾಚಾರ ಎಂದು ಹಂಚಿಕೊಂಡ ಚಿತ್ರಗಳು ವಾಸ್ತವವಾಗಿ ಹಳೆಯದು ಮತ್ತು ದೆಹಲಿ ಹಿಂಸಾಚಾರದ ಚಿತ್ರಗಳಾಗಿವೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?


pic

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...