Homeಕರ್ನಾಟಕಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿಯ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ

- Advertisement -
- Advertisement -

ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ, ಇಸ್ಲಾಂ ಧರ್ಮದ ವಿರುದ್ದ ದ್ವೇಷ ಹರಡುವ ಲೇಖನವೊಂದನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಈ ಲೇಖನವನ್ನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಹಿಜಾಬ್ ಬಗ್ಗೆ ಅವಹೇಳನಕಾರಿ ಮತ್ತು ತಪ್ಪು ಮಾಹಿತಿಯೊಂದಿಗೆ ಹರಿಯಬಿಡಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲು ಕುತ್ತಿಗೆಗೆ ಸುತ್ತಿಕೊಂಡು ವಿವಾದ ಸೃಷ್ಟಿಸಿದ ನಂತರ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಈ ಬರಹವನ್ನು ಸ್ವಾಮಿಜಿ ಹೆಸರಿನಲ್ಲಿ, ಜೋರ್ಡಾನ್‌ನ ರಾಜ ಕುಟುಂಬದ ಚಿತ್ರದೊಂದಿಗೆ ಹರಿಬಿಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ವಿಶೇಷವೇನೆಂದರೆ ಈ ಲೇಖನವನ್ನು ಹೆಚ್ಚಿನ ಕಡೆಗೆ ಹಂಚಿರುವವರು ಬಿಜೆಪಿ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಪಗಾಂಡ ಸೃಷ್ಟಿಸುವವ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರಾಗಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌‌

ವೈರಲ್ ಲೇಖನದ ಮೊದಲ ಪ್ಯಾರಾದಲ್ಲಿ ಜೊರ್ಡಾನ್‌ ರಾಜ ಕುಟುಂಬ ಪ್ರವಾದಿ ಮೊಹಮ್ಮದ್‌ ಅವರ ಕುಟುಂಬ ಎಂದು ಉಲ್ಲೇಖಿಸಲಾಗಿದೆ. “ಅಲ್ಲಿನ ರಾಜನಿಗೆ ಒಬ್ಬಳೇ ಪತ್ನಿ, ಯಾರೂ ಗಡ್ಡ ಬಿಟ್ಟಿಲ್ಲಾ, ಟೋಪಿ ಹಾಕಿಲ್ಲಾ, ಹೆಣ್ಣುಮಕ್ಕಳ್ಯಾರು ಬುರ್ಕಾ ಹಾಕಿಲ್ಲಾ, ಹಿಜಾಬ್ ಹಾಕಿಲ್ಲಾ, ಆಧುನಿಕ ವಸ್ತ್ರಗಳನ್ನೇ ತೊಡುತ್ತಿದ್ದಾರೆ, ಅತ್ಯಾಧುನಿಕ ಶಿಕ್ಷಣ ಪಡೆಯುತ್ತಿದ್ದಾರೆ, ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ, ಆಧುನಿಕರಂತೆ ಬದುಕುತ್ತಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಜೊರ್ಡಾನ್‌‌ ರಾಜಕುಟುಂಬವು ಪ್ರವಾದಿ ಮೊಹಮ್ಮದ್‌‌ ಅವರ ವಂಶಸ್ಥರು ಎಂದು ಘೋಷಿಸಿಕೊಂಡಿದ್ದು ನಿಜವೇ ಆಗಿದೆ. ಆದರೆ ಪ್ರವಾದಿ ಕುಟುಂಬ ಎಂದ ಮಾತ್ರಕ್ಕೆ ಅವರು ಆಚರಣೆ ಮಾಡುವುದೇ ಇಸ್ಲಾಂ ಎಂದಲ್ಲ. ಧರ್ಮವನ್ನು ಪಾಲನೆ ಮಾಡುವುದು ಅವರವರ ಸ್ವಾತಂತ್ಯ್ರವಾಗಿದೆ. ಮೊದಲ ಪ್ಯಾರಾದಲ್ಲಿ ಜೋರ್ಡಾನ್‌ಗೆ ರಾಜನಿಗೆ ‘ಒಬ್ಬಳೇ ಪತ್ನಿ’ ಎಂದು ಬರೆದು, ಇಸ್ಲಾಂ ಎಂದರೆ ಹಲವು ಪತ್ನಿಯರು ಇರಲೇಬೇಕು ಎಂದು ಪ್ರತಿಪಾದಿಸಲಾಗಿದೆ. ಆದರೆ ವಾಸ್ತವದಲ್ಲಿ ‘ಇಸ್ಲಾಂ’ ಬಹುಪತ್ನಿತ್ವವನ್ನು ಪ್ರತಿಪಾದಿಸುವುದಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಹಲವಾರು ಪತ್ನಿಯರನ್ನು ಕಟ್ಟಿಕೊಂಡವರಿಗೆ ಸಮಾಜದಲ್ಲಿ ಹೆಚ್ಚು ಬೆಲೆ ಇರುವುದು ಸಾಮಾನ್ಯವಾಗಿದ್ದ ಕಾಲದಲ್ಲಿ, ನಾಲ್ಕಕ್ಕಿಂತ ಹೆಚ್ಚು ಜನರನ್ನು ಪತ್ನಿಯರನ್ನು ಹೊಂದಿರಬಾರದು ಎಂದು ಇಸ್ಲಾಂ ಬೋಧಿಸಿತ್ತು. ಇದನ್ನೇ, ಮುಸ್ಲಿಮರು ನಾಲ್ಕು ಪತ್ನಿಯನ್ನು ಹೊಂದಿರಬಹುದು ಎಂದು ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ.

ಉಳಿದಂತೆ ಗಡ್ಡ, ಟೋಪಿ, ಬುರ್ಖಾ ಮತ್ತು ಹಿಜಾಬ್‌ ಅಥವಾ ಬೇರೆ ಆಚರಣೆಗಳು ಪಾಲಿಸುವುದು ಮತ್ತು ಬಿಡುವುದು ಅವರವರ ಸ್ವಾತಂತ್ಯ್ರವಾಗಿದೆ.

ಎರಡನೇ ಪ್ಯಾರಾದಲ್ಲಿ, “ಇಸ್ಲಾಂನಲ್ಲಿ ಎರಡು ಬಗೆ, ಒಂದು ಅಲ್ಲಾನಾ ಇಸ್ಲಾಂ, ಇನ್ನೊಂದು ಮುಲ್ಲಾನ ಇಸ್ಲಾಂ. ಇವರು ಅಲ್ಲಾ ಇಸ್ಲಾಂನವರು, ಅಲ್ಲಾನ ಇಸ್ಲಾಂನವರು ಎಲ್ಲರೊಳಗೊಂದಾಗಿ, ಎಲ್ಲರಂತೆ ಶಾಂತಿಯಿಂದ ಬದುಕುತ್ತಾರೆ. ಆದರೆ ಮುಲ್ಲಾನ ಇಸ್ಲಾಂನವರು ಅನಕ್ಷರಸ್ಥ ಮುಲ್ಲಾಗಳ ಮಾತು ಕೇಳಿ ಅವರು ಬದುಕಿರುವ ಸಮಾಜ-ದೇಶ ಎಲ್ಲವನ್ನು ಹಿಂಸಿಸುತ್ತಾ, ಭಯೋತ್ಪಾದನೆ, ಲವ್ ಜಿಹಾದ್, ಡ್ರಗ್ಸ್ ಮಾಫಿಯಾ, ರೌಡಿಸಂ, ದೋ ನಂಬರ್ ಬ್ಯುಸಿನೆಸ್ ಎಲ್ಲಾ‌ ಮಾಡುತ್ತಾ ಅಶಾಂತಿಗೆ ಕಾರಣರಾಗಿದ್ದಾರೆ. ಮೇಲಾಗಿ ಇಸ್ಲಾಂ ಸಂಪ್ರದಾಯ ಎಂದು ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಾ, ಬುರ್ಕಾ-ಹಿಜಬ್ ನೊಳಗೆ ತುರುಕಿ, ತಲಾಕ್, ಬಹುಪತ್ನಿತ್ವದ ಹೆಸರಿನಲ್ಲಿ ಮಕ್ಕಳ ಹೆರುವ ಯಂತ್ರ ಮಾಡಿಕೊಂಡಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ಈ ಪ್ಯಾರಾದಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ. ಯಾವುದೇ ಧರ್ಮವನ್ನು ಪಾಲಿಸುವವರು ತನ್ನ ಧರ್ಮವನ್ನು ಶಾಂತಿಯಿಂದಲೇ ಪಾಲಿಸುತ್ತಾ, ತನ್ನಷ್ಟಕ್ಕೆ ತಾನಿರುತ್ತಾರೆ. ಜೊತೆಗೆ ಈ ಪ್ಯಾರಾದಲ್ಲಿ ಉಲ್ಲೇಖಿಸಿದ, ‘ಸಮಾಜ ಹಾಗೂ ದೇಶದಲ್ಲಿ ಹಿಂಸೆ, ಭಯೋತ್ಪಾದನೆ, ಡ್ರಗ್ಸ್‌ ಮಾಫಿಯಾ, ರೌಡಿಸಂ, ಇನ್ನಿತರ ಅಶಾಂತಿ’ ಮಾಡುವವರು ಎಲ್ಲೆಡೆಯು ಇರುತ್ತಾರೆ. ಅದರಲ್ಲಿ ಧರ್ಮವನ್ನು ಎಳೆದು ತರುವುದು ಕೋಮುದ್ವೇಷವಾಗಿದೆ. ಎಲ್ಲಾ ಸಮಾಜ, ಸಮುದಾಯಗಳಲ್ಲಿ ಸಾಧಕರು, ಗಣ್ಯರು ಇರುವ ಹಾಗೆಯೆ ಸಮಾಜದ್ರೋಹಿಗಳು ಇರುತ್ತಾರೆ. ಲೇಖನದಲ್ಲಿ ಪ್ರತಿಪಾದಿಸಿರುವ ಹಾಗೆ ಮಹಿಳೆಯು ಮಕ್ಕಳ ಹೆರುವ ಯಂತ್ರ ಎಂದು ಇಸ್ಲಾಂ ಎಲ್ಲಿಯೂ ಉಲ್ಲೇಖಿಸಿಲ್ಲ. ಉಳಿದಂತೆ ‘ಲವ್ ಜಿಹಾದ್‌’ ಪದವನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ.  ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ‘ಲವ್ ಜಿಹಾದ್’ ಎಂಬುವುದೇ ಇಲ್ಲ ಎಂದು ಸದನದಲ್ಲೇ ಮಾಹಿತಿ ನೀಡಿದೆ. ಆದ್ದರಿಂದ ಈ ಹೇಳಿಕೆಯು ತಪ್ಪಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ ಹರಿಬಿಡಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ನಿಜಗುಣಾನಂದ ಸ್ವಾಮಿ ಅವರುನ್ನು ಸಂಪರ್ಕಿಸಿದ್ದು, “ಈ ಲೇಖನ ನಾನು ಬರೆದಿಲ್ಲ, ನನ್ನ ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸ್ವಾಮಿಗಳ ಆಪ್ತರೊಬ್ಬರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಆರೆಸ್ಸೆಸ್‌ ಮತ್ತು ಸಂಘಪರಿವಾರವನ್ನು ಸ್ವಾಮಿಗಳು ನಿರಂತರವಾಗಿ ಟೀಕಿಸುತ್ತಿರುವುದರಿಂದ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಈ ಲೇಖನವನ್ನು ಮೊದಲಿಗೆ ಸ್ವಾಮಿಗಳ ಹೆಸರಿನಲ್ಲಿ ಫೇಕ್‌ ಐಡಿ ಕ್ರಿಯೇಟ್‌ ಮಾಡಿ ಹರಿಯಬಿಡಲಾಗಿತ್ತು. ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬೇಕೆಂದರೆ, ವೈರಲ್ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿಲ್ಲ. ಅಲ್ಲದೆ ಲೇಖನದಲ್ಲಿ ಹಲವಾರು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಗಳಿವೆ. ಜೊತೆಗೆ ಲೇಖನವು ಮುಖ್ಯವಾಗಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲಿ ಬೇಕಾಗಿಯೆ ಬರೆಯಲಾಗಿದೆ. ಅದರಲ್ಲೂ ಈ ಲೇಖನವನ್ನು ಬಿಜೆಪಿ ಪರವಾಗಿ ಬೆಂಬಲಿಸುವ ಪೇಜ್‌ಗಳು ಹಂಚಿಕೊಳ್ಳುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...