Homeಕರ್ನಾಟಕಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿಯ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ

- Advertisement -
- Advertisement -

ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ, ಇಸ್ಲಾಂ ಧರ್ಮದ ವಿರುದ್ದ ದ್ವೇಷ ಹರಡುವ ಲೇಖನವೊಂದನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಈ ಲೇಖನವನ್ನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಹಿಜಾಬ್ ಬಗ್ಗೆ ಅವಹೇಳನಕಾರಿ ಮತ್ತು ತಪ್ಪು ಮಾಹಿತಿಯೊಂದಿಗೆ ಹರಿಯಬಿಡಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲು ಕುತ್ತಿಗೆಗೆ ಸುತ್ತಿಕೊಂಡು ವಿವಾದ ಸೃಷ್ಟಿಸಿದ ನಂತರ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಈ ಬರಹವನ್ನು ಸ್ವಾಮಿಜಿ ಹೆಸರಿನಲ್ಲಿ, ಜೋರ್ಡಾನ್‌ನ ರಾಜ ಕುಟುಂಬದ ಚಿತ್ರದೊಂದಿಗೆ ಹರಿಬಿಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ವಿಶೇಷವೇನೆಂದರೆ ಈ ಲೇಖನವನ್ನು ಹೆಚ್ಚಿನ ಕಡೆಗೆ ಹಂಚಿರುವವರು ಬಿಜೆಪಿ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಪಗಾಂಡ ಸೃಷ್ಟಿಸುವವ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರಾಗಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌‌

ವೈರಲ್ ಲೇಖನದ ಮೊದಲ ಪ್ಯಾರಾದಲ್ಲಿ ಜೊರ್ಡಾನ್‌ ರಾಜ ಕುಟುಂಬ ಪ್ರವಾದಿ ಮೊಹಮ್ಮದ್‌ ಅವರ ಕುಟುಂಬ ಎಂದು ಉಲ್ಲೇಖಿಸಲಾಗಿದೆ. “ಅಲ್ಲಿನ ರಾಜನಿಗೆ ಒಬ್ಬಳೇ ಪತ್ನಿ, ಯಾರೂ ಗಡ್ಡ ಬಿಟ್ಟಿಲ್ಲಾ, ಟೋಪಿ ಹಾಕಿಲ್ಲಾ, ಹೆಣ್ಣುಮಕ್ಕಳ್ಯಾರು ಬುರ್ಕಾ ಹಾಕಿಲ್ಲಾ, ಹಿಜಾಬ್ ಹಾಕಿಲ್ಲಾ, ಆಧುನಿಕ ವಸ್ತ್ರಗಳನ್ನೇ ತೊಡುತ್ತಿದ್ದಾರೆ, ಅತ್ಯಾಧುನಿಕ ಶಿಕ್ಷಣ ಪಡೆಯುತ್ತಿದ್ದಾರೆ, ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ, ಆಧುನಿಕರಂತೆ ಬದುಕುತ್ತಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಜೊರ್ಡಾನ್‌‌ ರಾಜಕುಟುಂಬವು ಪ್ರವಾದಿ ಮೊಹಮ್ಮದ್‌‌ ಅವರ ವಂಶಸ್ಥರು ಎಂದು ಘೋಷಿಸಿಕೊಂಡಿದ್ದು ನಿಜವೇ ಆಗಿದೆ. ಆದರೆ ಪ್ರವಾದಿ ಕುಟುಂಬ ಎಂದ ಮಾತ್ರಕ್ಕೆ ಅವರು ಆಚರಣೆ ಮಾಡುವುದೇ ಇಸ್ಲಾಂ ಎಂದಲ್ಲ. ಧರ್ಮವನ್ನು ಪಾಲನೆ ಮಾಡುವುದು ಅವರವರ ಸ್ವಾತಂತ್ಯ್ರವಾಗಿದೆ. ಮೊದಲ ಪ್ಯಾರಾದಲ್ಲಿ ಜೋರ್ಡಾನ್‌ಗೆ ರಾಜನಿಗೆ ‘ಒಬ್ಬಳೇ ಪತ್ನಿ’ ಎಂದು ಬರೆದು, ಇಸ್ಲಾಂ ಎಂದರೆ ಹಲವು ಪತ್ನಿಯರು ಇರಲೇಬೇಕು ಎಂದು ಪ್ರತಿಪಾದಿಸಲಾಗಿದೆ. ಆದರೆ ವಾಸ್ತವದಲ್ಲಿ ‘ಇಸ್ಲಾಂ’ ಬಹುಪತ್ನಿತ್ವವನ್ನು ಪ್ರತಿಪಾದಿಸುವುದಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಹಲವಾರು ಪತ್ನಿಯರನ್ನು ಕಟ್ಟಿಕೊಂಡವರಿಗೆ ಸಮಾಜದಲ್ಲಿ ಹೆಚ್ಚು ಬೆಲೆ ಇರುವುದು ಸಾಮಾನ್ಯವಾಗಿದ್ದ ಕಾಲದಲ್ಲಿ, ನಾಲ್ಕಕ್ಕಿಂತ ಹೆಚ್ಚು ಜನರನ್ನು ಪತ್ನಿಯರನ್ನು ಹೊಂದಿರಬಾರದು ಎಂದು ಇಸ್ಲಾಂ ಬೋಧಿಸಿತ್ತು. ಇದನ್ನೇ, ಮುಸ್ಲಿಮರು ನಾಲ್ಕು ಪತ್ನಿಯನ್ನು ಹೊಂದಿರಬಹುದು ಎಂದು ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ.

ಉಳಿದಂತೆ ಗಡ್ಡ, ಟೋಪಿ, ಬುರ್ಖಾ ಮತ್ತು ಹಿಜಾಬ್‌ ಅಥವಾ ಬೇರೆ ಆಚರಣೆಗಳು ಪಾಲಿಸುವುದು ಮತ್ತು ಬಿಡುವುದು ಅವರವರ ಸ್ವಾತಂತ್ಯ್ರವಾಗಿದೆ.

ಎರಡನೇ ಪ್ಯಾರಾದಲ್ಲಿ, “ಇಸ್ಲಾಂನಲ್ಲಿ ಎರಡು ಬಗೆ, ಒಂದು ಅಲ್ಲಾನಾ ಇಸ್ಲಾಂ, ಇನ್ನೊಂದು ಮುಲ್ಲಾನ ಇಸ್ಲಾಂ. ಇವರು ಅಲ್ಲಾ ಇಸ್ಲಾಂನವರು, ಅಲ್ಲಾನ ಇಸ್ಲಾಂನವರು ಎಲ್ಲರೊಳಗೊಂದಾಗಿ, ಎಲ್ಲರಂತೆ ಶಾಂತಿಯಿಂದ ಬದುಕುತ್ತಾರೆ. ಆದರೆ ಮುಲ್ಲಾನ ಇಸ್ಲಾಂನವರು ಅನಕ್ಷರಸ್ಥ ಮುಲ್ಲಾಗಳ ಮಾತು ಕೇಳಿ ಅವರು ಬದುಕಿರುವ ಸಮಾಜ-ದೇಶ ಎಲ್ಲವನ್ನು ಹಿಂಸಿಸುತ್ತಾ, ಭಯೋತ್ಪಾದನೆ, ಲವ್ ಜಿಹಾದ್, ಡ್ರಗ್ಸ್ ಮಾಫಿಯಾ, ರೌಡಿಸಂ, ದೋ ನಂಬರ್ ಬ್ಯುಸಿನೆಸ್ ಎಲ್ಲಾ‌ ಮಾಡುತ್ತಾ ಅಶಾಂತಿಗೆ ಕಾರಣರಾಗಿದ್ದಾರೆ. ಮೇಲಾಗಿ ಇಸ್ಲಾಂ ಸಂಪ್ರದಾಯ ಎಂದು ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಾ, ಬುರ್ಕಾ-ಹಿಜಬ್ ನೊಳಗೆ ತುರುಕಿ, ತಲಾಕ್, ಬಹುಪತ್ನಿತ್ವದ ಹೆಸರಿನಲ್ಲಿ ಮಕ್ಕಳ ಹೆರುವ ಯಂತ್ರ ಮಾಡಿಕೊಂಡಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ಈ ಪ್ಯಾರಾದಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ. ಯಾವುದೇ ಧರ್ಮವನ್ನು ಪಾಲಿಸುವವರು ತನ್ನ ಧರ್ಮವನ್ನು ಶಾಂತಿಯಿಂದಲೇ ಪಾಲಿಸುತ್ತಾ, ತನ್ನಷ್ಟಕ್ಕೆ ತಾನಿರುತ್ತಾರೆ. ಜೊತೆಗೆ ಈ ಪ್ಯಾರಾದಲ್ಲಿ ಉಲ್ಲೇಖಿಸಿದ, ‘ಸಮಾಜ ಹಾಗೂ ದೇಶದಲ್ಲಿ ಹಿಂಸೆ, ಭಯೋತ್ಪಾದನೆ, ಡ್ರಗ್ಸ್‌ ಮಾಫಿಯಾ, ರೌಡಿಸಂ, ಇನ್ನಿತರ ಅಶಾಂತಿ’ ಮಾಡುವವರು ಎಲ್ಲೆಡೆಯು ಇರುತ್ತಾರೆ. ಅದರಲ್ಲಿ ಧರ್ಮವನ್ನು ಎಳೆದು ತರುವುದು ಕೋಮುದ್ವೇಷವಾಗಿದೆ. ಎಲ್ಲಾ ಸಮಾಜ, ಸಮುದಾಯಗಳಲ್ಲಿ ಸಾಧಕರು, ಗಣ್ಯರು ಇರುವ ಹಾಗೆಯೆ ಸಮಾಜದ್ರೋಹಿಗಳು ಇರುತ್ತಾರೆ. ಲೇಖನದಲ್ಲಿ ಪ್ರತಿಪಾದಿಸಿರುವ ಹಾಗೆ ಮಹಿಳೆಯು ಮಕ್ಕಳ ಹೆರುವ ಯಂತ್ರ ಎಂದು ಇಸ್ಲಾಂ ಎಲ್ಲಿಯೂ ಉಲ್ಲೇಖಿಸಿಲ್ಲ. ಉಳಿದಂತೆ ‘ಲವ್ ಜಿಹಾದ್‌’ ಪದವನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ.  ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ‘ಲವ್ ಜಿಹಾದ್’ ಎಂಬುವುದೇ ಇಲ್ಲ ಎಂದು ಸದನದಲ್ಲೇ ಮಾಹಿತಿ ನೀಡಿದೆ. ಆದ್ದರಿಂದ ಈ ಹೇಳಿಕೆಯು ತಪ್ಪಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ ಹರಿಬಿಡಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ನಿಜಗುಣಾನಂದ ಸ್ವಾಮಿ ಅವರುನ್ನು ಸಂಪರ್ಕಿಸಿದ್ದು, “ಈ ಲೇಖನ ನಾನು ಬರೆದಿಲ್ಲ, ನನ್ನ ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸ್ವಾಮಿಗಳ ಆಪ್ತರೊಬ್ಬರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಆರೆಸ್ಸೆಸ್‌ ಮತ್ತು ಸಂಘಪರಿವಾರವನ್ನು ಸ್ವಾಮಿಗಳು ನಿರಂತರವಾಗಿ ಟೀಕಿಸುತ್ತಿರುವುದರಿಂದ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಈ ಲೇಖನವನ್ನು ಮೊದಲಿಗೆ ಸ್ವಾಮಿಗಳ ಹೆಸರಿನಲ್ಲಿ ಫೇಕ್‌ ಐಡಿ ಕ್ರಿಯೇಟ್‌ ಮಾಡಿ ಹರಿಯಬಿಡಲಾಗಿತ್ತು. ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬೇಕೆಂದರೆ, ವೈರಲ್ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿಲ್ಲ. ಅಲ್ಲದೆ ಲೇಖನದಲ್ಲಿ ಹಲವಾರು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಗಳಿವೆ. ಜೊತೆಗೆ ಲೇಖನವು ಮುಖ್ಯವಾಗಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲಿ ಬೇಕಾಗಿಯೆ ಬರೆಯಲಾಗಿದೆ. ಅದರಲ್ಲೂ ಈ ಲೇಖನವನ್ನು ಬಿಜೆಪಿ ಪರವಾಗಿ ಬೆಂಬಲಿಸುವ ಪೇಜ್‌ಗಳು ಹಂಚಿಕೊಳ್ಳುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...