Homeಕರ್ನಾಟಕಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿಯ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ

- Advertisement -
- Advertisement -

ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ, ಇಸ್ಲಾಂ ಧರ್ಮದ ವಿರುದ್ದ ದ್ವೇಷ ಹರಡುವ ಲೇಖನವೊಂದನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಈ ಲೇಖನವನ್ನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಹಿಜಾಬ್ ಬಗ್ಗೆ ಅವಹೇಳನಕಾರಿ ಮತ್ತು ತಪ್ಪು ಮಾಹಿತಿಯೊಂದಿಗೆ ಹರಿಯಬಿಡಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲು ಕುತ್ತಿಗೆಗೆ ಸುತ್ತಿಕೊಂಡು ವಿವಾದ ಸೃಷ್ಟಿಸಿದ ನಂತರ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಈ ಬರಹವನ್ನು ಸ್ವಾಮಿಜಿ ಹೆಸರಿನಲ್ಲಿ, ಜೋರ್ಡಾನ್‌ನ ರಾಜ ಕುಟುಂಬದ ಚಿತ್ರದೊಂದಿಗೆ ಹರಿಬಿಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ವಿಶೇಷವೇನೆಂದರೆ ಈ ಲೇಖನವನ್ನು ಹೆಚ್ಚಿನ ಕಡೆಗೆ ಹಂಚಿರುವವರು ಬಿಜೆಪಿ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಪಗಾಂಡ ಸೃಷ್ಟಿಸುವವ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರಾಗಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌‌

ವೈರಲ್ ಲೇಖನದ ಮೊದಲ ಪ್ಯಾರಾದಲ್ಲಿ ಜೊರ್ಡಾನ್‌ ರಾಜ ಕುಟುಂಬ ಪ್ರವಾದಿ ಮೊಹಮ್ಮದ್‌ ಅವರ ಕುಟುಂಬ ಎಂದು ಉಲ್ಲೇಖಿಸಲಾಗಿದೆ. “ಅಲ್ಲಿನ ರಾಜನಿಗೆ ಒಬ್ಬಳೇ ಪತ್ನಿ, ಯಾರೂ ಗಡ್ಡ ಬಿಟ್ಟಿಲ್ಲಾ, ಟೋಪಿ ಹಾಕಿಲ್ಲಾ, ಹೆಣ್ಣುಮಕ್ಕಳ್ಯಾರು ಬುರ್ಕಾ ಹಾಕಿಲ್ಲಾ, ಹಿಜಾಬ್ ಹಾಕಿಲ್ಲಾ, ಆಧುನಿಕ ವಸ್ತ್ರಗಳನ್ನೇ ತೊಡುತ್ತಿದ್ದಾರೆ, ಅತ್ಯಾಧುನಿಕ ಶಿಕ್ಷಣ ಪಡೆಯುತ್ತಿದ್ದಾರೆ, ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ, ಆಧುನಿಕರಂತೆ ಬದುಕುತ್ತಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಜೊರ್ಡಾನ್‌‌ ರಾಜಕುಟುಂಬವು ಪ್ರವಾದಿ ಮೊಹಮ್ಮದ್‌‌ ಅವರ ವಂಶಸ್ಥರು ಎಂದು ಘೋಷಿಸಿಕೊಂಡಿದ್ದು ನಿಜವೇ ಆಗಿದೆ. ಆದರೆ ಪ್ರವಾದಿ ಕುಟುಂಬ ಎಂದ ಮಾತ್ರಕ್ಕೆ ಅವರು ಆಚರಣೆ ಮಾಡುವುದೇ ಇಸ್ಲಾಂ ಎಂದಲ್ಲ. ಧರ್ಮವನ್ನು ಪಾಲನೆ ಮಾಡುವುದು ಅವರವರ ಸ್ವಾತಂತ್ಯ್ರವಾಗಿದೆ. ಮೊದಲ ಪ್ಯಾರಾದಲ್ಲಿ ಜೋರ್ಡಾನ್‌ಗೆ ರಾಜನಿಗೆ ‘ಒಬ್ಬಳೇ ಪತ್ನಿ’ ಎಂದು ಬರೆದು, ಇಸ್ಲಾಂ ಎಂದರೆ ಹಲವು ಪತ್ನಿಯರು ಇರಲೇಬೇಕು ಎಂದು ಪ್ರತಿಪಾದಿಸಲಾಗಿದೆ. ಆದರೆ ವಾಸ್ತವದಲ್ಲಿ ‘ಇಸ್ಲಾಂ’ ಬಹುಪತ್ನಿತ್ವವನ್ನು ಪ್ರತಿಪಾದಿಸುವುದಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಹಲವಾರು ಪತ್ನಿಯರನ್ನು ಕಟ್ಟಿಕೊಂಡವರಿಗೆ ಸಮಾಜದಲ್ಲಿ ಹೆಚ್ಚು ಬೆಲೆ ಇರುವುದು ಸಾಮಾನ್ಯವಾಗಿದ್ದ ಕಾಲದಲ್ಲಿ, ನಾಲ್ಕಕ್ಕಿಂತ ಹೆಚ್ಚು ಜನರನ್ನು ಪತ್ನಿಯರನ್ನು ಹೊಂದಿರಬಾರದು ಎಂದು ಇಸ್ಲಾಂ ಬೋಧಿಸಿತ್ತು. ಇದನ್ನೇ, ಮುಸ್ಲಿಮರು ನಾಲ್ಕು ಪತ್ನಿಯನ್ನು ಹೊಂದಿರಬಹುದು ಎಂದು ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ.

ಉಳಿದಂತೆ ಗಡ್ಡ, ಟೋಪಿ, ಬುರ್ಖಾ ಮತ್ತು ಹಿಜಾಬ್‌ ಅಥವಾ ಬೇರೆ ಆಚರಣೆಗಳು ಪಾಲಿಸುವುದು ಮತ್ತು ಬಿಡುವುದು ಅವರವರ ಸ್ವಾತಂತ್ಯ್ರವಾಗಿದೆ.

ಎರಡನೇ ಪ್ಯಾರಾದಲ್ಲಿ, “ಇಸ್ಲಾಂನಲ್ಲಿ ಎರಡು ಬಗೆ, ಒಂದು ಅಲ್ಲಾನಾ ಇಸ್ಲಾಂ, ಇನ್ನೊಂದು ಮುಲ್ಲಾನ ಇಸ್ಲಾಂ. ಇವರು ಅಲ್ಲಾ ಇಸ್ಲಾಂನವರು, ಅಲ್ಲಾನ ಇಸ್ಲಾಂನವರು ಎಲ್ಲರೊಳಗೊಂದಾಗಿ, ಎಲ್ಲರಂತೆ ಶಾಂತಿಯಿಂದ ಬದುಕುತ್ತಾರೆ. ಆದರೆ ಮುಲ್ಲಾನ ಇಸ್ಲಾಂನವರು ಅನಕ್ಷರಸ್ಥ ಮುಲ್ಲಾಗಳ ಮಾತು ಕೇಳಿ ಅವರು ಬದುಕಿರುವ ಸಮಾಜ-ದೇಶ ಎಲ್ಲವನ್ನು ಹಿಂಸಿಸುತ್ತಾ, ಭಯೋತ್ಪಾದನೆ, ಲವ್ ಜಿಹಾದ್, ಡ್ರಗ್ಸ್ ಮಾಫಿಯಾ, ರೌಡಿಸಂ, ದೋ ನಂಬರ್ ಬ್ಯುಸಿನೆಸ್ ಎಲ್ಲಾ‌ ಮಾಡುತ್ತಾ ಅಶಾಂತಿಗೆ ಕಾರಣರಾಗಿದ್ದಾರೆ. ಮೇಲಾಗಿ ಇಸ್ಲಾಂ ಸಂಪ್ರದಾಯ ಎಂದು ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಾ, ಬುರ್ಕಾ-ಹಿಜಬ್ ನೊಳಗೆ ತುರುಕಿ, ತಲಾಕ್, ಬಹುಪತ್ನಿತ್ವದ ಹೆಸರಿನಲ್ಲಿ ಮಕ್ಕಳ ಹೆರುವ ಯಂತ್ರ ಮಾಡಿಕೊಂಡಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ಈ ಪ್ಯಾರಾದಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ. ಯಾವುದೇ ಧರ್ಮವನ್ನು ಪಾಲಿಸುವವರು ತನ್ನ ಧರ್ಮವನ್ನು ಶಾಂತಿಯಿಂದಲೇ ಪಾಲಿಸುತ್ತಾ, ತನ್ನಷ್ಟಕ್ಕೆ ತಾನಿರುತ್ತಾರೆ. ಜೊತೆಗೆ ಈ ಪ್ಯಾರಾದಲ್ಲಿ ಉಲ್ಲೇಖಿಸಿದ, ‘ಸಮಾಜ ಹಾಗೂ ದೇಶದಲ್ಲಿ ಹಿಂಸೆ, ಭಯೋತ್ಪಾದನೆ, ಡ್ರಗ್ಸ್‌ ಮಾಫಿಯಾ, ರೌಡಿಸಂ, ಇನ್ನಿತರ ಅಶಾಂತಿ’ ಮಾಡುವವರು ಎಲ್ಲೆಡೆಯು ಇರುತ್ತಾರೆ. ಅದರಲ್ಲಿ ಧರ್ಮವನ್ನು ಎಳೆದು ತರುವುದು ಕೋಮುದ್ವೇಷವಾಗಿದೆ. ಎಲ್ಲಾ ಸಮಾಜ, ಸಮುದಾಯಗಳಲ್ಲಿ ಸಾಧಕರು, ಗಣ್ಯರು ಇರುವ ಹಾಗೆಯೆ ಸಮಾಜದ್ರೋಹಿಗಳು ಇರುತ್ತಾರೆ. ಲೇಖನದಲ್ಲಿ ಪ್ರತಿಪಾದಿಸಿರುವ ಹಾಗೆ ಮಹಿಳೆಯು ಮಕ್ಕಳ ಹೆರುವ ಯಂತ್ರ ಎಂದು ಇಸ್ಲಾಂ ಎಲ್ಲಿಯೂ ಉಲ್ಲೇಖಿಸಿಲ್ಲ. ಉಳಿದಂತೆ ‘ಲವ್ ಜಿಹಾದ್‌’ ಪದವನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ.  ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ‘ಲವ್ ಜಿಹಾದ್’ ಎಂಬುವುದೇ ಇಲ್ಲ ಎಂದು ಸದನದಲ್ಲೇ ಮಾಹಿತಿ ನೀಡಿದೆ. ಆದ್ದರಿಂದ ಈ ಹೇಳಿಕೆಯು ತಪ್ಪಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ ಹರಿಬಿಡಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ನಿಜಗುಣಾನಂದ ಸ್ವಾಮಿ ಅವರುನ್ನು ಸಂಪರ್ಕಿಸಿದ್ದು, “ಈ ಲೇಖನ ನಾನು ಬರೆದಿಲ್ಲ, ನನ್ನ ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸ್ವಾಮಿಗಳ ಆಪ್ತರೊಬ್ಬರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಆರೆಸ್ಸೆಸ್‌ ಮತ್ತು ಸಂಘಪರಿವಾರವನ್ನು ಸ್ವಾಮಿಗಳು ನಿರಂತರವಾಗಿ ಟೀಕಿಸುತ್ತಿರುವುದರಿಂದ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಈ ಲೇಖನವನ್ನು ಮೊದಲಿಗೆ ಸ್ವಾಮಿಗಳ ಹೆಸರಿನಲ್ಲಿ ಫೇಕ್‌ ಐಡಿ ಕ್ರಿಯೇಟ್‌ ಮಾಡಿ ಹರಿಯಬಿಡಲಾಗಿತ್ತು. ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬೇಕೆಂದರೆ, ವೈರಲ್ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿಲ್ಲ. ಅಲ್ಲದೆ ಲೇಖನದಲ್ಲಿ ಹಲವಾರು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಗಳಿವೆ. ಜೊತೆಗೆ ಲೇಖನವು ಮುಖ್ಯವಾಗಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲಿ ಬೇಕಾಗಿಯೆ ಬರೆಯಲಾಗಿದೆ. ಅದರಲ್ಲೂ ಈ ಲೇಖನವನ್ನು ಬಿಜೆಪಿ ಪರವಾಗಿ ಬೆಂಬಲಿಸುವ ಪೇಜ್‌ಗಳು ಹಂಚಿಕೊಳ್ಳುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...