Homeಕರ್ನಾಟಕಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿಯ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ

- Advertisement -
- Advertisement -

ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ, ಇಸ್ಲಾಂ ಧರ್ಮದ ವಿರುದ್ದ ದ್ವೇಷ ಹರಡುವ ಲೇಖನವೊಂದನ್ನು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಹರಿದಾಡುತ್ತಿದೆ. ಈ ಲೇಖನವನ್ನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಹಿಜಾಬ್ ಬಗ್ಗೆ ಅವಹೇಳನಕಾರಿ ಮತ್ತು ತಪ್ಪು ಮಾಹಿತಿಯೊಂದಿಗೆ ಹರಿಯಬಿಡಲಾಗಿದೆ.

ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ ಧರಿಸುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ಕೇಸರಿ ಶಾಲು ಕುತ್ತಿಗೆಗೆ ಸುತ್ತಿಕೊಂಡು ವಿವಾದ ಸೃಷ್ಟಿಸಿದ ನಂತರ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಈ ಬರಹವನ್ನು ಸ್ವಾಮಿಜಿ ಹೆಸರಿನಲ್ಲಿ, ಜೋರ್ಡಾನ್‌ನ ರಾಜ ಕುಟುಂಬದ ಚಿತ್ರದೊಂದಿಗೆ ಹರಿಬಿಡಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ವಿಶೇಷವೇನೆಂದರೆ ಈ ಲೇಖನವನ್ನು ಹೆಚ್ಚಿನ ಕಡೆಗೆ ಹಂಚಿರುವವರು ಬಿಜೆಪಿ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಪಗಾಂಡ ಸೃಷ್ಟಿಸುವವ ಪೇಜ್‌ಗಳು ಮತ್ತು ಬಿಜೆಪಿ ಬೆಂಬಲಿಗರಾಗಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌‌‌

ವೈರಲ್ ಲೇಖನದ ಮೊದಲ ಪ್ಯಾರಾದಲ್ಲಿ ಜೊರ್ಡಾನ್‌ ರಾಜ ಕುಟುಂಬ ಪ್ರವಾದಿ ಮೊಹಮ್ಮದ್‌ ಅವರ ಕುಟುಂಬ ಎಂದು ಉಲ್ಲೇಖಿಸಲಾಗಿದೆ. “ಅಲ್ಲಿನ ರಾಜನಿಗೆ ಒಬ್ಬಳೇ ಪತ್ನಿ, ಯಾರೂ ಗಡ್ಡ ಬಿಟ್ಟಿಲ್ಲಾ, ಟೋಪಿ ಹಾಕಿಲ್ಲಾ, ಹೆಣ್ಣುಮಕ್ಕಳ್ಯಾರು ಬುರ್ಕಾ ಹಾಕಿಲ್ಲಾ, ಹಿಜಾಬ್ ಹಾಕಿಲ್ಲಾ, ಆಧುನಿಕ ವಸ್ತ್ರಗಳನ್ನೇ ತೊಡುತ್ತಿದ್ದಾರೆ, ಅತ್ಯಾಧುನಿಕ ಶಿಕ್ಷಣ ಪಡೆಯುತ್ತಿದ್ದಾರೆ, ಬರ್ತ್ ಡೇ ಆಚರಿಸಿಕೊಳ್ಳುತ್ತಾರೆ, ಆಧುನಿಕರಂತೆ ಬದುಕುತ್ತಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಜೊರ್ಡಾನ್‌‌ ರಾಜಕುಟುಂಬವು ಪ್ರವಾದಿ ಮೊಹಮ್ಮದ್‌‌ ಅವರ ವಂಶಸ್ಥರು ಎಂದು ಘೋಷಿಸಿಕೊಂಡಿದ್ದು ನಿಜವೇ ಆಗಿದೆ. ಆದರೆ ಪ್ರವಾದಿ ಕುಟುಂಬ ಎಂದ ಮಾತ್ರಕ್ಕೆ ಅವರು ಆಚರಣೆ ಮಾಡುವುದೇ ಇಸ್ಲಾಂ ಎಂದಲ್ಲ. ಧರ್ಮವನ್ನು ಪಾಲನೆ ಮಾಡುವುದು ಅವರವರ ಸ್ವಾತಂತ್ಯ್ರವಾಗಿದೆ. ಮೊದಲ ಪ್ಯಾರಾದಲ್ಲಿ ಜೋರ್ಡಾನ್‌ಗೆ ರಾಜನಿಗೆ ‘ಒಬ್ಬಳೇ ಪತ್ನಿ’ ಎಂದು ಬರೆದು, ಇಸ್ಲಾಂ ಎಂದರೆ ಹಲವು ಪತ್ನಿಯರು ಇರಲೇಬೇಕು ಎಂದು ಪ್ರತಿಪಾದಿಸಲಾಗಿದೆ. ಆದರೆ ವಾಸ್ತವದಲ್ಲಿ ‘ಇಸ್ಲಾಂ’ ಬಹುಪತ್ನಿತ್ವವನ್ನು ಪ್ರತಿಪಾದಿಸುವುದಿಲ್ಲ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ಹಲವಾರು ಪತ್ನಿಯರನ್ನು ಕಟ್ಟಿಕೊಂಡವರಿಗೆ ಸಮಾಜದಲ್ಲಿ ಹೆಚ್ಚು ಬೆಲೆ ಇರುವುದು ಸಾಮಾನ್ಯವಾಗಿದ್ದ ಕಾಲದಲ್ಲಿ, ನಾಲ್ಕಕ್ಕಿಂತ ಹೆಚ್ಚು ಜನರನ್ನು ಪತ್ನಿಯರನ್ನು ಹೊಂದಿರಬಾರದು ಎಂದು ಇಸ್ಲಾಂ ಬೋಧಿಸಿತ್ತು. ಇದನ್ನೇ, ಮುಸ್ಲಿಮರು ನಾಲ್ಕು ಪತ್ನಿಯನ್ನು ಹೊಂದಿರಬಹುದು ಎಂದು ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ.

ಉಳಿದಂತೆ ಗಡ್ಡ, ಟೋಪಿ, ಬುರ್ಖಾ ಮತ್ತು ಹಿಜಾಬ್‌ ಅಥವಾ ಬೇರೆ ಆಚರಣೆಗಳು ಪಾಲಿಸುವುದು ಮತ್ತು ಬಿಡುವುದು ಅವರವರ ಸ್ವಾತಂತ್ಯ್ರವಾಗಿದೆ.

ಎರಡನೇ ಪ್ಯಾರಾದಲ್ಲಿ, “ಇಸ್ಲಾಂನಲ್ಲಿ ಎರಡು ಬಗೆ, ಒಂದು ಅಲ್ಲಾನಾ ಇಸ್ಲಾಂ, ಇನ್ನೊಂದು ಮುಲ್ಲಾನ ಇಸ್ಲಾಂ. ಇವರು ಅಲ್ಲಾ ಇಸ್ಲಾಂನವರು, ಅಲ್ಲಾನ ಇಸ್ಲಾಂನವರು ಎಲ್ಲರೊಳಗೊಂದಾಗಿ, ಎಲ್ಲರಂತೆ ಶಾಂತಿಯಿಂದ ಬದುಕುತ್ತಾರೆ. ಆದರೆ ಮುಲ್ಲಾನ ಇಸ್ಲಾಂನವರು ಅನಕ್ಷರಸ್ಥ ಮುಲ್ಲಾಗಳ ಮಾತು ಕೇಳಿ ಅವರು ಬದುಕಿರುವ ಸಮಾಜ-ದೇಶ ಎಲ್ಲವನ್ನು ಹಿಂಸಿಸುತ್ತಾ, ಭಯೋತ್ಪಾದನೆ, ಲವ್ ಜಿಹಾದ್, ಡ್ರಗ್ಸ್ ಮಾಫಿಯಾ, ರೌಡಿಸಂ, ದೋ ನಂಬರ್ ಬ್ಯುಸಿನೆಸ್ ಎಲ್ಲಾ‌ ಮಾಡುತ್ತಾ ಅಶಾಂತಿಗೆ ಕಾರಣರಾಗಿದ್ದಾರೆ. ಮೇಲಾಗಿ ಇಸ್ಲಾಂ ಸಂಪ್ರದಾಯ ಎಂದು ಹೆಣ್ಣುಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುತ್ತಾ, ಬುರ್ಕಾ-ಹಿಜಬ್ ನೊಳಗೆ ತುರುಕಿ, ತಲಾಕ್, ಬಹುಪತ್ನಿತ್ವದ ಹೆಸರಿನಲ್ಲಿ ಮಕ್ಕಳ ಹೆರುವ ಯಂತ್ರ ಮಾಡಿಕೊಂಡಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ಈ ಪ್ಯಾರಾದಲ್ಲಿ ಕೋಮುದ್ವೇಷ ಹರಡುವ ಹುನ್ನಾರವಿದೆ. ಯಾವುದೇ ಧರ್ಮವನ್ನು ಪಾಲಿಸುವವರು ತನ್ನ ಧರ್ಮವನ್ನು ಶಾಂತಿಯಿಂದಲೇ ಪಾಲಿಸುತ್ತಾ, ತನ್ನಷ್ಟಕ್ಕೆ ತಾನಿರುತ್ತಾರೆ. ಜೊತೆಗೆ ಈ ಪ್ಯಾರಾದಲ್ಲಿ ಉಲ್ಲೇಖಿಸಿದ, ‘ಸಮಾಜ ಹಾಗೂ ದೇಶದಲ್ಲಿ ಹಿಂಸೆ, ಭಯೋತ್ಪಾದನೆ, ಡ್ರಗ್ಸ್‌ ಮಾಫಿಯಾ, ರೌಡಿಸಂ, ಇನ್ನಿತರ ಅಶಾಂತಿ’ ಮಾಡುವವರು ಎಲ್ಲೆಡೆಯು ಇರುತ್ತಾರೆ. ಅದರಲ್ಲಿ ಧರ್ಮವನ್ನು ಎಳೆದು ತರುವುದು ಕೋಮುದ್ವೇಷವಾಗಿದೆ. ಎಲ್ಲಾ ಸಮಾಜ, ಸಮುದಾಯಗಳಲ್ಲಿ ಸಾಧಕರು, ಗಣ್ಯರು ಇರುವ ಹಾಗೆಯೆ ಸಮಾಜದ್ರೋಹಿಗಳು ಇರುತ್ತಾರೆ. ಲೇಖನದಲ್ಲಿ ಪ್ರತಿಪಾದಿಸಿರುವ ಹಾಗೆ ಮಹಿಳೆಯು ಮಕ್ಕಳ ಹೆರುವ ಯಂತ್ರ ಎಂದು ಇಸ್ಲಾಂ ಎಲ್ಲಿಯೂ ಉಲ್ಲೇಖಿಸಿಲ್ಲ. ಉಳಿದಂತೆ ‘ಲವ್ ಜಿಹಾದ್‌’ ಪದವನ್ನು ಲೇಖನದಲ್ಲಿ ಉಲ್ಲೇಖಿಸಲಾಗಿದೆ.  ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವೇ ‘ಲವ್ ಜಿಹಾದ್’ ಎಂಬುವುದೇ ಇಲ್ಲ ಎಂದು ಸದನದಲ್ಲೇ ಮಾಹಿತಿ ನೀಡಿದೆ. ಆದ್ದರಿಂದ ಈ ಹೇಳಿಕೆಯು ತಪ್ಪಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಎಲ್ಲಕ್ಕಿಂತ ಮುಖ್ಯವಾಗಿ ಈ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿದ್ದಾರೆ ಎಂದು ಪ್ರತಿಪಾದಿಸಿ ಹರಿಬಿಡಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ನಿಜಗುಣಾನಂದ ಸ್ವಾಮಿ ಅವರುನ್ನು ಸಂಪರ್ಕಿಸಿದ್ದು, “ಈ ಲೇಖನ ನಾನು ಬರೆದಿಲ್ಲ, ನನ್ನ ಹೆಸರು ಬಳಸಿ ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಸ್ವಾಮಿಗಳ ಆಪ್ತರೊಬ್ಬರು ನಾನುಗೌರಿ.ಕಾಂ ಜೊತೆಗೆ ಮಾತನಾಡಿ, “ಆರೆಸ್ಸೆಸ್‌ ಮತ್ತು ಸಂಘಪರಿವಾರವನ್ನು ಸ್ವಾಮಿಗಳು ನಿರಂತರವಾಗಿ ಟೀಕಿಸುತ್ತಿರುವುದರಿಂದ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಈ ಲೇಖನವನ್ನು ಮೊದಲಿಗೆ ಸ್ವಾಮಿಗಳ ಹೆಸರಿನಲ್ಲಿ ಫೇಕ್‌ ಐಡಿ ಕ್ರಿಯೇಟ್‌ ಮಾಡಿ ಹರಿಯಬಿಡಲಾಗಿತ್ತು. ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಸ್ವಾಮಿಗಳ ಹೆಸರನ್ನು ಬಳಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ದ ಸ್ವಾಮಿಜಿ ಅಭಿಮಾನಿಗಳು ಕಾನೂನು ಹೋರಾಟಕ್ಕೆ ಸಿದ್ದರಾಗುತ್ತಿದ್ದಾರೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಹೇಳಬೇಕೆಂದರೆ, ವೈರಲ್ ಲೇಖನವನ್ನು ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಅವರು ಬರೆದಿಲ್ಲ. ಅಲ್ಲದೆ ಲೇಖನದಲ್ಲಿ ಹಲವಾರು ದಾರಿ ತಪ್ಪಿಸುವ ಮತ್ತು ಸುಳ್ಳು ಮಾಹಿತಿಗಳಿವೆ. ಜೊತೆಗೆ ಲೇಖನವು ಮುಖ್ಯವಾಗಿ ಮುಸ್ಲಿಂ ಸಮುದಾಯದ ಬಗ್ಗೆ ದ್ವೇಷ ಹರಡಲಿ ಬೇಕಾಗಿಯೆ ಬರೆಯಲಾಗಿದೆ. ಅದರಲ್ಲೂ ಈ ಲೇಖನವನ್ನು ಬಿಜೆಪಿ ಪರವಾಗಿ ಬೆಂಬಲಿಸುವ ಪೇಜ್‌ಗಳು ಹಂಚಿಕೊಳ್ಳುತ್ತಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....