Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

- Advertisement -
- Advertisement -

‘ಉತ್ತರ ಪ್ರದೇಶದ ದುರ್ಗಾಪೂಜಾ ಪೆಂಡಾಲ್ ಮೇಲೆ ದಾಳಿ ಮಾಡಿದ ಮುಸ್ಲಿಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಿಂದೂಗಳು’ ಎಂದು ಪ್ರತಿಪಾದಿಸಿ ಗಲಭೆ ನಡೆಸುತ್ತಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತಾಪ್‌ಗಢ್ ಜಿಲ್ಲೆಯ ಲಾಲ್‌ಗಂಜ್ ಪಟ್ಟಣದ ಸಮೀಪವಿರುವ ದುರ್ಗಾ ಮಂಟಪದ ಮೇಲೆ ಮುಸ್ಲಿಂ ಗುಂಪು ಇತ್ತೀಚೆಗೆ ದಾಳಿ ಮಾಡಿದೆ ಎಂದು ಈ ವಿಡಿಯೊ ಜೊತೆಗಿನ ಪೋಸ್ಟ್ ಪ್ರತಿಪಾದಿಸುತ್ತದೆ.

ಮುಸ್ಲಿಮರ ದಾಳಿಗೆ ಪ್ರತೀಕಾರವಾಗಿ ಹಿಂದೂಗಳು ಮುಸ್ಲಿಮರ ವಾಹನಗಳನ್ನು ಧ್ವಂಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಪೋಸ್ಟ್‌ನ ಆರ್ಕೈವ್‌ ಇಲ್ಲಿ ನೋಡಬಹುದು.

ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ವೀಡಿಯೋವನ್ನು ಕೂಲಂಕುಷವಾಗಿ ಗಮನಿಸಿದಾಗ, ಛತ್ತೀಸ್‌ಗಢ ವಾಹನದ ನೋಂದಣಿ ಸಂಖ್ಯೆಯನ್ನು ಜನಸಮೂಹವು ಧ್ವಂಸಗೊಳಿಸುತ್ತಿರುವ ವಾಹನಗಳಲ್ಲಿ ಕಾಣಬಹುದಾಗಿದೆ. ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಹುಡುಕಿದಾಗ, ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಇತ್ತೀಚಿನ ಕೋಮು ಹಿಂಸಾಚಾರದ ದೃಶ್ಯಗಳು ಎಂದು ವಿವರಿಸುವ ಹಲವಾರು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ನೋಡಬಹುದಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವೀಡಿಯೊಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ, ‘ದೈನಿಕ್ ಭಾಸ್ಕರ್’ ಪ್ರಕಟಿಸಿದ ಸುದ್ದಿಯೊಂದು ಲಭಿಸಿದ್ದು, ಅದರಲ್ಲಿ ಧ್ವಂಸಗೊಳಿಸಿದ ವಾಹನಗಳ ದೃಶ್ಯಗಳನ್ನು ನೋಡಬಹುದು. ಈ ವರದಿಯು, 05 ಅಕ್ಟೋಬರ್ 2021 ರಂದು ಛತ್ತೀಸ್‌ಗಢದ ಕಭಿರ್‌ಧಾಮ್ ಜಿಲ್ಲೆಯ ಕವರ್ಧಾ ಪಟ್ಟಣದಲ್ಲಿ ದೊಣ್ಣೆಗಳೊಂದಿಗೆ ಬಂದಿದ್ದ ದೊಡ್ಡ ಗುಂಪು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ವರದಿ ಮಾಡಿದೆ.

ಈ ಘಟನೆಯ ಸಂಪೂರ್ಣ ವಿವರಗಳ ಹಲವಾರು ವರದಿಗಳು, ವಿಡಿಯೊ ವರದಿಗಳು ಪ್ರಕಟವಾಗಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವರದಿಗಳು, “ಲೋಹರಾ ಚೌಕ್ ಪ್ರದೇಶದಿಂದ ಧಾರ್ಮಿಕ ಧ್ವಜಗಳನ್ನು ತೆಗೆದುಹಾಕುವ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದವು. ಈ ಸಂಘರ್ಷದ ನಂತರ 03 ಅಕ್ಟೋಬರ್ 2021 ರಂದು ಕವರ್ಧಾದಲ್ಲಿ ಕೋಮುಗಲಭೆ ಪ್ರಾರಂಭವಾಯಿತು”. ನಂತರ 05 ಅಕ್ಟೋಬರ್ 2021 ರಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ ವೇಳೆ, ಆ ಗುಂಪು ಮುಸ್ಲಿಮರು ಇರುವ ಪ್ರದೇಶಗಳಿಗೆ ಪ್ರವೇಶಿಸಿ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಧ್ವಂಸಗೊಳಿಸಿತು” ಎಂದು ಹೇಳುತ್ತವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ವೈರಲ್‌ ವಿಡಿಯೊ ಉತ್ತರ ಪ್ರದೇಶದ ಪ್ರತಾಪ್‌ಘರ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯ ದೃಶ್ಯಗಳೆಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ, ಉತ್ತರ ಪ್ರದೇಶ ಪೊಲೀಸ್ ಫ್ಯಾಕ್ಟ್-ಚೆಕ್ ತಂಡವು 13 ಅಕ್ಟೋಬರ್ 2021 ರಂದು ಟ್ವೀಟ್ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ.

ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಹೊರತು ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಪ್ರತಾಪ್‌ಗಢದ ಲಾಲ್‌ಗಂಜ್ ಪ್ರದೇಶದ ಬಳಿ ದುರ್ಗಾಪೂಜಾ ಪೆಂಡಾಲ್‌ ಮೇಲೆ ಮುಸ್ಲಿಂ ಗುಂಪು ಯಾವುದೆ ದಾಳಿ ನಡೆಸಿಲ್ಲ” ಎಂದು ಪ್ರತಾಪ್‌ಗಢ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಛತ್ತೀಸ್‌ಗಢದ ಕವರ್ಧಾ ಕೋಮು ಹಿಂಸಾಚಾರದ ವೀಡಿಯೊವನ್ನು ಉತ್ತರ ಪ್ರದೇಶದ ದುರ್ಗಾ ಪೆಂಡಾಲ್‌ ಮೇಲೆ ದಾಳಿ ಮಾಡಿದ ಮುಸ್ಲಿಂಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಹಿಂದೂಗಳ ಗುಂಪಿನ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...