Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

- Advertisement -
- Advertisement -

‘ಉತ್ತರ ಪ್ರದೇಶದ ದುರ್ಗಾಪೂಜಾ ಪೆಂಡಾಲ್ ಮೇಲೆ ದಾಳಿ ಮಾಡಿದ ಮುಸ್ಲಿಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಿಂದೂಗಳು’ ಎಂದು ಪ್ರತಿಪಾದಿಸಿ ಗಲಭೆ ನಡೆಸುತ್ತಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತಾಪ್‌ಗಢ್ ಜಿಲ್ಲೆಯ ಲಾಲ್‌ಗಂಜ್ ಪಟ್ಟಣದ ಸಮೀಪವಿರುವ ದುರ್ಗಾ ಮಂಟಪದ ಮೇಲೆ ಮುಸ್ಲಿಂ ಗುಂಪು ಇತ್ತೀಚೆಗೆ ದಾಳಿ ಮಾಡಿದೆ ಎಂದು ಈ ವಿಡಿಯೊ ಜೊತೆಗಿನ ಪೋಸ್ಟ್ ಪ್ರತಿಪಾದಿಸುತ್ತದೆ.

ಮುಸ್ಲಿಮರ ದಾಳಿಗೆ ಪ್ರತೀಕಾರವಾಗಿ ಹಿಂದೂಗಳು ಮುಸ್ಲಿಮರ ವಾಹನಗಳನ್ನು ಧ್ವಂಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಪೋಸ್ಟ್‌ನ ಆರ್ಕೈವ್‌ ಇಲ್ಲಿ ನೋಡಬಹುದು.

ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ವೀಡಿಯೋವನ್ನು ಕೂಲಂಕುಷವಾಗಿ ಗಮನಿಸಿದಾಗ, ಛತ್ತೀಸ್‌ಗಢ ವಾಹನದ ನೋಂದಣಿ ಸಂಖ್ಯೆಯನ್ನು ಜನಸಮೂಹವು ಧ್ವಂಸಗೊಳಿಸುತ್ತಿರುವ ವಾಹನಗಳಲ್ಲಿ ಕಾಣಬಹುದಾಗಿದೆ. ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಹುಡುಕಿದಾಗ, ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಇತ್ತೀಚಿನ ಕೋಮು ಹಿಂಸಾಚಾರದ ದೃಶ್ಯಗಳು ಎಂದು ವಿವರಿಸುವ ಹಲವಾರು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ನೋಡಬಹುದಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವೀಡಿಯೊಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ, ‘ದೈನಿಕ್ ಭಾಸ್ಕರ್’ ಪ್ರಕಟಿಸಿದ ಸುದ್ದಿಯೊಂದು ಲಭಿಸಿದ್ದು, ಅದರಲ್ಲಿ ಧ್ವಂಸಗೊಳಿಸಿದ ವಾಹನಗಳ ದೃಶ್ಯಗಳನ್ನು ನೋಡಬಹುದು. ಈ ವರದಿಯು, 05 ಅಕ್ಟೋಬರ್ 2021 ರಂದು ಛತ್ತೀಸ್‌ಗಢದ ಕಭಿರ್‌ಧಾಮ್ ಜಿಲ್ಲೆಯ ಕವರ್ಧಾ ಪಟ್ಟಣದಲ್ಲಿ ದೊಣ್ಣೆಗಳೊಂದಿಗೆ ಬಂದಿದ್ದ ದೊಡ್ಡ ಗುಂಪು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ವರದಿ ಮಾಡಿದೆ.

ಈ ಘಟನೆಯ ಸಂಪೂರ್ಣ ವಿವರಗಳ ಹಲವಾರು ವರದಿಗಳು, ವಿಡಿಯೊ ವರದಿಗಳು ಪ್ರಕಟವಾಗಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವರದಿಗಳು, “ಲೋಹರಾ ಚೌಕ್ ಪ್ರದೇಶದಿಂದ ಧಾರ್ಮಿಕ ಧ್ವಜಗಳನ್ನು ತೆಗೆದುಹಾಕುವ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದವು. ಈ ಸಂಘರ್ಷದ ನಂತರ 03 ಅಕ್ಟೋಬರ್ 2021 ರಂದು ಕವರ್ಧಾದಲ್ಲಿ ಕೋಮುಗಲಭೆ ಪ್ರಾರಂಭವಾಯಿತು”. ನಂತರ 05 ಅಕ್ಟೋಬರ್ 2021 ರಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ ವೇಳೆ, ಆ ಗುಂಪು ಮುಸ್ಲಿಮರು ಇರುವ ಪ್ರದೇಶಗಳಿಗೆ ಪ್ರವೇಶಿಸಿ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಧ್ವಂಸಗೊಳಿಸಿತು” ಎಂದು ಹೇಳುತ್ತವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ವೈರಲ್‌ ವಿಡಿಯೊ ಉತ್ತರ ಪ್ರದೇಶದ ಪ್ರತಾಪ್‌ಘರ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯ ದೃಶ್ಯಗಳೆಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ, ಉತ್ತರ ಪ್ರದೇಶ ಪೊಲೀಸ್ ಫ್ಯಾಕ್ಟ್-ಚೆಕ್ ತಂಡವು 13 ಅಕ್ಟೋಬರ್ 2021 ರಂದು ಟ್ವೀಟ್ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ.

ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಹೊರತು ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಪ್ರತಾಪ್‌ಗಢದ ಲಾಲ್‌ಗಂಜ್ ಪ್ರದೇಶದ ಬಳಿ ದುರ್ಗಾಪೂಜಾ ಪೆಂಡಾಲ್‌ ಮೇಲೆ ಮುಸ್ಲಿಂ ಗುಂಪು ಯಾವುದೆ ದಾಳಿ ನಡೆಸಿಲ್ಲ” ಎಂದು ಪ್ರತಾಪ್‌ಗಢ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಛತ್ತೀಸ್‌ಗಢದ ಕವರ್ಧಾ ಕೋಮು ಹಿಂಸಾಚಾರದ ವೀಡಿಯೊವನ್ನು ಉತ್ತರ ಪ್ರದೇಶದ ದುರ್ಗಾ ಪೆಂಡಾಲ್‌ ಮೇಲೆ ದಾಳಿ ಮಾಡಿದ ಮುಸ್ಲಿಂಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಹಿಂದೂಗಳ ಗುಂಪಿನ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...