Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

ಫ್ಯಾಕ್ಟ್‌ಚೆಕ್: ಈ ಕೋಮು ಹಿಂಸಾಚಾರ ಯುಪಿಯದ್ದಲ್ಲ; ಅಲ್ಲಿ ದುರ್ಗಾ ಪೂಜೆಯ ಮೇಲೆ ಮುಸ್ಲಿಮರು ದಾಳಿ ನಡೆಸಿಲ್ಲ

- Advertisement -
- Advertisement -

‘ಉತ್ತರ ಪ್ರದೇಶದ ದುರ್ಗಾಪೂಜಾ ಪೆಂಡಾಲ್ ಮೇಲೆ ದಾಳಿ ಮಾಡಿದ ಮುಸ್ಲಿಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಹಿಂದೂಗಳು’ ಎಂದು ಪ್ರತಿಪಾದಿಸಿ ಗಲಭೆ ನಡೆಸುತ್ತಿರುವ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತಾಪ್‌ಗಢ್ ಜಿಲ್ಲೆಯ ಲಾಲ್‌ಗಂಜ್ ಪಟ್ಟಣದ ಸಮೀಪವಿರುವ ದುರ್ಗಾ ಮಂಟಪದ ಮೇಲೆ ಮುಸ್ಲಿಂ ಗುಂಪು ಇತ್ತೀಚೆಗೆ ದಾಳಿ ಮಾಡಿದೆ ಎಂದು ಈ ವಿಡಿಯೊ ಜೊತೆಗಿನ ಪೋಸ್ಟ್ ಪ್ರತಿಪಾದಿಸುತ್ತದೆ.

ಮುಸ್ಲಿಮರ ದಾಳಿಗೆ ಪ್ರತೀಕಾರವಾಗಿ ಹಿಂದೂಗಳು ಮುಸ್ಲಿಮರ ವಾಹನಗಳನ್ನು ಧ್ವಂಸ ಮಾಡುತ್ತಿರುವುದು ಕಂಡುಬಂದಿದೆ ಎಂದು ಕೂಡಾ ಈ ಪೋಸ್ಟ್‌ನಲ್ಲಿ ಹೇಳಲಾಗಿದೆ. ಪೋಸ್ಟ್‌ನ ಆರ್ಕೈವ್‌ ಇಲ್ಲಿ ನೋಡಬಹುದು.

ಇದನ್ನೂ ಓದಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ವೀಡಿಯೋವನ್ನು ಕೂಲಂಕುಷವಾಗಿ ಗಮನಿಸಿದಾಗ, ಛತ್ತೀಸ್‌ಗಢ ವಾಹನದ ನೋಂದಣಿ ಸಂಖ್ಯೆಯನ್ನು ಜನಸಮೂಹವು ಧ್ವಂಸಗೊಳಿಸುತ್ತಿರುವ ವಾಹನಗಳಲ್ಲಿ ಕಾಣಬಹುದಾಗಿದೆ. ಸಂಬಂಧಿತ ಕೀವರ್ಡ್‌ಗಳನ್ನು ಬಳಸಿಕೊಂಡು ವೀಡಿಯೊಗಳನ್ನು ಹುಡುಕಿದಾಗ, ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಇತ್ತೀಚಿನ ಕೋಮು ಹಿಂಸಾಚಾರದ ದೃಶ್ಯಗಳು ಎಂದು ವಿವರಿಸುವ ಹಲವಾರು ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳನ್ನು ನೋಡಬಹುದಾಗಿದೆ. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವೀಡಿಯೊಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹುಡುಕಾಡಿದಾಗ, ‘ದೈನಿಕ್ ಭಾಸ್ಕರ್’ ಪ್ರಕಟಿಸಿದ ಸುದ್ದಿಯೊಂದು ಲಭಿಸಿದ್ದು, ಅದರಲ್ಲಿ ಧ್ವಂಸಗೊಳಿಸಿದ ವಾಹನಗಳ ದೃಶ್ಯಗಳನ್ನು ನೋಡಬಹುದು. ಈ ವರದಿಯು, 05 ಅಕ್ಟೋಬರ್ 2021 ರಂದು ಛತ್ತೀಸ್‌ಗಢದ ಕಭಿರ್‌ಧಾಮ್ ಜಿಲ್ಲೆಯ ಕವರ್ಧಾ ಪಟ್ಟಣದಲ್ಲಿ ದೊಣ್ಣೆಗಳೊಂದಿಗೆ ಬಂದಿದ್ದ ದೊಡ್ಡ ಗುಂಪು ರಸ್ತೆಯಲ್ಲಿದ್ದ ವಾಹನಗಳನ್ನು ಧ್ವಂಸಗೊಳಿಸಿದೆ ಎಂದು ವರದಿ ಮಾಡಿದೆ.

ಈ ಘಟನೆಯ ಸಂಪೂರ್ಣ ವಿವರಗಳ ಹಲವಾರು ವರದಿಗಳು, ವಿಡಿಯೊ ವರದಿಗಳು ಪ್ರಕಟವಾಗಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಈ ವರದಿಗಳು, “ಲೋಹರಾ ಚೌಕ್ ಪ್ರದೇಶದಿಂದ ಧಾರ್ಮಿಕ ಧ್ವಜಗಳನ್ನು ತೆಗೆದುಹಾಕುವ ಬಗ್ಗೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದ್ದವು. ಈ ಸಂಘರ್ಷದ ನಂತರ 03 ಅಕ್ಟೋಬರ್ 2021 ರಂದು ಕವರ್ಧಾದಲ್ಲಿ ಕೋಮುಗಲಭೆ ಪ್ರಾರಂಭವಾಯಿತು”. ನಂತರ 05 ಅಕ್ಟೋಬರ್ 2021 ರಂದು ವಿಶ್ವ ಹಿಂದೂ ಪರಿಷತ್ ಘೋಷಿಸಿದ ಬಂದ್‌ ವೇಳೆ, ಆ ಗುಂಪು ಮುಸ್ಲಿಮರು ಇರುವ ಪ್ರದೇಶಗಳಿಗೆ ಪ್ರವೇಶಿಸಿ ರಸ್ತೆಯಲ್ಲಿ ನಿಲ್ಲಿಸಿದ ವಾಹನಗಳನ್ನು ಧ್ವಂಸಗೊಳಿಸಿತು” ಎಂದು ಹೇಳುತ್ತವೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ‘ಊದುಪಾವೈ’ ಔಷಧೀಯ ಸಸ್ಯದ ಕಥೆ ಓದಿ ನಕ್ಕುಬಿಡಿ!

ವೈರಲ್‌ ವಿಡಿಯೊ ಉತ್ತರ ಪ್ರದೇಶದ ಪ್ರತಾಪ್‌ಘರ್ ಜಿಲ್ಲೆಯಲ್ಲಿ ನಡೆದ ಕೋಮುಗಲಭೆಯ ದೃಶ್ಯಗಳೆಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗ, ಉತ್ತರ ಪ್ರದೇಶ ಪೊಲೀಸ್ ಫ್ಯಾಕ್ಟ್-ಚೆಕ್ ತಂಡವು 13 ಅಕ್ಟೋಬರ್ 2021 ರಂದು ಟ್ವೀಟ್ ಮೂಲಕ ಸ್ಪಷ್ಟೀಕರಣವನ್ನು ನೀಡಿದೆ.

ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಛತ್ತೀಸ್‌ಗಢದ ಕವರ್ಧಾ ಪಟ್ಟಣದಲ್ಲಿ ಹೊರತು ಉತ್ತರ ಪ್ರದೇಶದ ಪ್ರತಾಪ್‌ಗಢ ಜಿಲ್ಲೆಯಲ್ಲಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಸ್ಪಷ್ಟಪಡಿಸಿದ್ದಾರೆ. “ಪ್ರತಾಪ್‌ಗಢದ ಲಾಲ್‌ಗಂಜ್ ಪ್ರದೇಶದ ಬಳಿ ದುರ್ಗಾಪೂಜಾ ಪೆಂಡಾಲ್‌ ಮೇಲೆ ಮುಸ್ಲಿಂ ಗುಂಪು ಯಾವುದೆ ದಾಳಿ ನಡೆಸಿಲ್ಲ” ಎಂದು ಪ್ರತಾಪ್‌ಗಢ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಛತ್ತೀಸ್‌ಗಢದ ಕವರ್ಧಾ ಕೋಮು ಹಿಂಸಾಚಾರದ ವೀಡಿಯೊವನ್ನು ಉತ್ತರ ಪ್ರದೇಶದ ದುರ್ಗಾ ಪೆಂಡಾಲ್‌ ಮೇಲೆ ದಾಳಿ ಮಾಡಿದ ಮುಸ್ಲಿಂಮರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುತ್ತಿರುವ ಹಿಂದೂಗಳ ಗುಂಪಿನ ದೃಶ್ಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...