Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...