Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....