Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...