Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...