Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...