Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ...

ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಬಾಲಕಿ ‘ಅಹೆದ್ ತಮೀಮಿ’ ತಮ್ಮ ತಾಯ್ನಾಡಿಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನಲೆಯಲ್ಲಿ ಹಲವಾರು ಹಳೆಯ ಹಾಗೂ ಸಂಬಂಧಪಡದ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ “ರಷ್ಯಾ ಸೈನಿಕನಿಗೆ ನಿನ್ನ ದೇಶಕ್ಕೆ ವಾಪಸ್ ಹೋಗು ಎಂದು ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ” ಎಂದು ಪ್ರತಿಪಾದಿಸಿ ಪುಟ್ಟ ಬಾಲಕಿಯ ವಿಡಿಯೊವೊಂದು ವೈರಲ್ ಆಗಿದೆ.

ಬಲಪಂಥೀಯ ವಿಚಾರಗಳೊಂದಿಗೆ ಗುರುತಿಸಿಕೊಂಡಿರುವ ಕನ್ನಡದ ಸುದ್ದಿ ಚಾನೆಲ್‌ಗಳಾದ ಪಬ್ಲಿಕ್‌ ಟಿವಿ, ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌ ಈ ಬಗ್ಗೆ ವಿಡಿಯೊ ಸುದ್ದಿಯನ್ನು ಮಾಡಿದೆ. ಪಬ್ಲಿಕ್ ಟಿವಿ ‘ಈ ಕ್ಷಣವೇ ನಮ್ಮ ದೇಶ ಬಿಟ್ಟು ಹೋಗಿ- ಉಕ್ರೇನ್ ಬಾಲಕಿಯ ಸಿಟ್ಟು’ ಎಂಬ ಶೀರ್ಷಿಕೆಯ ಜೊತೆಗೆ ಬಾಲಕಿಯ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿ ಮಾಡಿದೆ.

ಏಷ್ಯಾನೆಟ್‌‌ ಸುವರ್ಣ ನ್ಯೂಸ್‌  ನಮ್ಮ ದೇಶವನ್ನು ಬಿಟ್ಟು ತೊಲಗಿ, ಇಲ್ಲದಿದ್ರೆ ಸಾಯಿಸುವೆ, ರಷ್ಯಾ ಸೈನಿಕರಿಗೆ ಉಕ್ರೇನ್ ಬಾಲಕಿ ಆವಾಜ್’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊ ಸುದ್ದಿ ಮಾಡಿದೆ. ಜೊತೆಗೆ ತನ್ನ ಫೇಸ್‌ಬುಕ್‌ ಪೇಜ್‌ ಅಲ್ಲೂ ಈ ಸುದ್ದಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ.

ದಿಗ್ವಿಜಯ ನ್ಯೂಸ್‌ನ ವೆಬ್‌ ಆವೃತ್ತಿಯಾದ ವಿಜಯವಾಣಿ.ನೆಟ್‌, “ನಮ್​ ದೇಶಕ್ಕೆ ಯಾಕ್​ ಬಂದ್ರಿ… ರೈಫಲ್​ ಹಿಡಿದ ಸೈನಿಕನಿಗೆ ರಸ್ತೆಯಲ್ಲೇ ಪುಟ್ಟ ಬಾಲಕಿ ಆವಾಜ್! ಮನಕಲಕುತ್ತೆ ಈ ದೃಶ್ಯ’’ ಶೀರ್ಷಿಕೆಯೊಂದಿಗೆ ವರದಿ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಕೂಡಾ ಅದೇ ನಿರೂಪಣೆಯೊಂದಿಗೆ ಈ ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊದ ಸ್ಕ್ರೀನ್‌ಶಾಟ್ ಬಳಸಿಕೊಂಡು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮಾಡಿದಾಗ, ಈ ವಿಡಿಯೊ ಸುಮಾರು 9 ವರ್ಷಗಳಷ್ಟು ಹಳೆಯದಾಗಿದ್ದು, ಇದನ್ನು ಫ್ಯಾಲೆಸ್ತೀನ್‌ನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ಕಂಡುಕೊಂಡಿದ್ದೇವೆ.

ವಿಡಿಯೊದಲ್ಲಿ ಇರುವ ದಿಟ್ಟ ಬಾಲಕಿಯ ಹೆಸರು ಅಹೆದ್ ತಮೀಮಿ ಎಂದಾಗಿದ್ದು, ಇವರು ಫ್ಯಾಲೆಸ್ತೀನಿ ಹೋರಾಟಗಾರ್ತಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಅಹೆದ್‌ ತಮೀಮಿ ತನ್ನ ತಾಯ್ನಾಡಿನಲ್ಲಿ ಇಸ್ರೇಲಿ ವಸಾಹತುಗಾರರು ಮಾಡುವ ಅಕ್ರಮಗಳ ವಿರುದ್ದ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. 2018 ರಲ್ಲಿ ಇಸ್ರೇಲಿ ಮಿಲಿಟರಿ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಕ್ಕೆ ಅವರನ್ನು ಬಂಧಿಸಿ ವಿಚಾರಣೆ ಕೂಡಾ ನಡೆಸಿತ್ತು.

ಇಸ್ರೇಲಿ ನ್ಯಾಯಾಲಯದಲ್ಲಿ ಅಹೆದ್‌ ತಮೀಮಿ

ಅಹೆದ್ ತಮೀಮಿ ಅವರು ತನ್ನ ತಾಯ್ನಾಡಿನ ಪರವಾಗಿ ಮಾಡಲಾಗುತ್ತಿರುವ ಹೋರಾಟಗಳಲ್ಲಿ ನಿರಂತರವಾಗಿ ಗುರುತಿಸಿಕೊಂಡಿದ್ದಾರೆ. ಅವರು ಫ್ಯಾಲೆಸ್ತೀನಿ ಪ್ರತಿರೋಧ ಹೋರಾಟದ ಐಕಾನ್ ಬಾಲಕಿಯಾಗಿದ್ದಾರೆ.

ಟೈಮ್ಸ್‌ ಆಫ್‌ ಇಸ್ರೇಲ್‌ ಪತ್ರಿಕೆಯ ಸ್ಕ್ರೀನ್ ಶಾಟ್

ಒಟ್ಟಿನಲ್ಲಿ ಹೇಳಬಹುದಾದರೆ, ‘ರಷ್ಯಾ ಸೈನಿಕನಿಗೆ ಬೆದರಿಸುತ್ತಿರುವ ಉಕ್ರೇನ್ ದೇಶದ ಬಾಲಕಿ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊಗೂ, ರಷ್ಯಾ-ಉಕ್ರೇನ್ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೊ ಪ್ಯಾಲೆಸ್ತೀನ್‌ ದೇಶದ್ದಾಗಿದ್ದು, ಸೈನಿಕನೂ ವಸಾಹತುಶಾಹಿ ದೇಶವಾದ ಇಸ್ರೇಲ್‌ನವರಾಗಿದ್ದಾರೆ. ಇದು 2012 ನೇ ಇಸವಿಯ ವಿಡಿಯೊವಾಗಿದ್ದು, ದಿಟ್ಟ ಬಾಲಕಿಯು ಹೆಸರು ಅಹೆದ್‌ ತಮೀಮಿ ಎಂದಾಗಿದೆ. ಅವರು ಪ್ಯಾಲೆಸ್ತೀನ್‌ ದೇಶದ ಹೋರಾಟಗಾರ್ತಿಯಾಗಿದ್ದಾರೆ.

ಅಹೆದ್ ತಮೀಮಿ ಅವರು ಮತ್ತಷ್ಟು ವಿಡಿಯೊಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...